ಮರ್ಕಂಜ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಇದರ ಅಭಿವೃದ್ಧಿ ನಿರ್ವಹಣಾ ಸಮಿತಿ ನೇತೃತ್ವದಲ್ಲಿ ನೂತನ ಭೋಜನ ಶಾಲಾ ಕಟ್ಟಡ ನಿರ್ಮಾಣಕ್ಕೆ ಮಾಜಿ ಸಚಿವ ಎಸ್. ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು. ಸರಕಾರಿ ಶಾಲೆ ನಮ್ಮ ಊರಿನ ಶಾಲೆ ಎಂಬ ಮನೋಭಾವ ಇರಬೇಕು. ಜೊತೆಗೆ ಅಭಿವೃದ್ಧಿ ಮಾಡುವ ಇಚ್ಛಾಶಕ್ತಿ ಇರಬೇಕು ಸರಕಾರದಿಂದ ಎಲ್ಲವೂ ಬರುತ್ತದೆ ಎಂಬ ಭಾವನೆ ಬೇಡ ನಾವೆಲ್ಲರೂ ಸೇರಿಕೊಂಡು ಅಭಿವೃದ್ಧಿಯಲ್ಲಿ
ಕೈಜೋಡಿಸಬೇಕು ಎಂದು ಅವರು ಹೇಳಿದರು.
ಶ್ರೀ ಅನ್ನಪೂರ್ಣೇಶ್ವರಿ ಯೋಗಿ ಸಿದ್ದ ಮಠದ ಸ್ವಾಮೀಜಿ ರಾಜೇಶ್ ನಾಥ್ ಶ್ರೀ, ಶಾಲಾ ಅಭಿವೃದ್ಧಿ ನಿರ್ವಹಣಾ ಸಮಿತಿಯ ಸಂಚಾಲಕ ಜಗನ್ನಾಥ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹೇಮ ಕುಮಾರ್ ಜೋಗಿಮೂಲೆ ಮಾತಾಡಿದರು. ವೇದಿಕೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಗೀತಾ, ಶಾಲಾ ಮೇಲುಸ್ತುವಾರಿ ಅಧ್ಯಕ್ಷೆ ಮೀನಾಕ್ಷಿ ಬೊಮ್ಮೇಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಶಿಕಾಂತ್ ಬೂಡು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ದೇವರಾಜ್ ಎಸ್.ಕೆ. ಸ್ವಾಗತಿಸಿ, ಸಹ ಶಿಕ್ಷಕ ಬೆಳ್ಳಿಯಪ್ಪ ನಿರೂಪಿಸಿ ವಂದಿಸಿದರು. ಶಾಲಾ ಮೇಲುಸ್ತುವಾರಿ ಸಮಿತಿ ಪದಾಧಿಕಾರಿಗಳು ಅಭಿವೃದ್ಧಿ ನಿರ್ವಹಣಾ ಸಮಿತಿಯ ಪದಾಧಿಕಾರಿಗಳು ಶಾಲಾ ಪೋಷಕರು ಶಾಲಾ ಶಿಕ್ಷಕ ವೃಂದದವರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು