ಸುಳ್ಯ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಸುಳ್ಯ ವಿಧಾನಸಭಾ ಕ್ಷೇತ್ರ ಮಟ್ಟದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಸುಳ್ಯ ಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಯಿತು. ತಾಲೂಕು ಸ್ವೀಪ್ ಸಮಿತಿ ಹಾಗೂ ಸುಳ್ಯ ನಗರಪಂಚಾಯತ್ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಆಯೋಗದಿಂದ
ನೀಡಿದ ವಿವಿಧ ಮತದಾನ ಜಾಗೃತಿ ವಿಡಿಯೋ ಗಳನ್ನು ಪ್ರದರ್ಶನ ಮಾಡಲಾಯಿತು. ಮತದಾನ ಜಾಗೃತಿಗೆ ಸಂಬಂಧಿತ ಭಿತ್ತಿಪತ್ರ ಪತ್ರಗಳನ್ನು ಪ್ರದರ್ಶಿಸಿ, ಸಾರ್ವಜನಿಕರಿಗೆ ಹಂಚಿಕೆ ಮಾಡಲಾಯಿತು. ವೃತ್ತಾಕಾರದ ಮಾನವ ಸಂಕೋಲೆ ನಿರ್ಮಿಸಿ ಮತದಾನ ಜಾಗೃತಿಯ ಸಂದೇಶ ನೀಡಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಸ್ವೀಒ್ ಸಮಿತಿ ಅಧ್ಯಕ್ಷ ಹಾಗು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಎನ್.ಭವಾನಿಶಂಕರ್, ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ಜಿ.ಮಂಜುನಾಥ್, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ್, ಆರೋಗ್ಯ ಇಲಾಖೆಯ ಅಧಿಕಾರಿ ಪ್ರಮೀಳಾ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಂಜೀವಿನಿ ಒಕ್ಕೂಟದ ಸದಸ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಸುಳ್ಯ ನಗರ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.