The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ನ.26 ಮತ್ತು 27 ರಂದು ಕನಕಮಜಲಿನ ‘ಕನಕ ಕಲಾಗ್ರಾಮ’ದಲ್ಲಿ ಮೇದಿನಿ ಉತ್ಸವ: ರಾಷ್ಟ್ರೀಯ ಮಟ್ಟದ ನೃತ್ಯೋತ್ಸವ ಹಾಗು ಕಲಾ ಪ್ರದರ್ಶನ

by ದಿ ಸುಳ್ಯ ಮಿರರ್ ಸುದ್ದಿಜಾಲ November 19, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 19, 2022
Share this article

ಸುಳ್ಯ: ಮಂಡ್ಯ ಹಾಗು ಮೈಸೂರಿನಲ್ಲಿ ಕಲಾ ಕ್ಷೇತ್ರದಲ್ಲಿ ತನ್ನದೇ ಛಾಪು ಮೂಡಿಸಿರುವ ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ರಾಷ್ಟ್ರೀಯ ಮಟ್ಟದ ನೃತ್ಯೋತ್ಸವ ಹಾಗು ಚಿತ್ರ ಕಲಾ ಪ್ರದರ್ಶನ ‘ಮೇದಿನಿ ಉತ್ಸವ’ ನ.26 ಮತ್ತು 27 ರಂದು ಸುಳ್ಯ ತಾಲೂಕಿನ ಕನಕಮಜಲಿನ ‘ಕನಕ ಕಲಾ ಗ್ರಾಮ’ದಲ್ಲಿ ನಡೆಯಲಿದೆ. ಗ್ರಾಮೀಣ ಪ್ರದೇಶದಲ್ಲಿ ಶಾಸ್ತ್ರೀಯ ನೃತ್ಯ ಕಲಾ ಪ್ರಕಾರಗಳ ಜಾಗೃತಿ ಮೂಡಿಸುವ ಉದ್ದೇಶದಿಂದ ಮೂರ್ಜೆ ಶ್ರೀ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಗೌಡ ಅವರ ಸ್ಮರಣಾರ್ಥ ಎರಡು ದಿನಗಳ ಅದ್ದೂರಿ ಕಲಾ ಸಂಭ್ರಮ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

‘ಮೇದಿನಿ ಉತ್ಸವ” ಆಯೋಜಿಸಲಾಗಿದೆ. ನ.26 ರಂದು ಸಂಜೆ 6 ಕ್ಕೆ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಉತ್ಸವವನ್ನು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪುರಸ್ಕೃತರಾದ ತೂಗು ಸೇತುವೆಗಳ ಸರದಾರ ಡಾ.ಗಿರೀಶ್ ಭಾರದ್ವಾಜ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಗುಣವತಿ ಕೊಲ್ಲಂತ್ತಡ್ಕ, ಪುತ್ತೂರಿನ ಎಸ್‌ಡಿಪಿ ರೆಮಿಡೀಸ್‌ ಆಂಡ್ ರಿಸರ್ಚ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕ ಡಾ‌.ಹರಿಕೃಷ್ಣ ಪಾಣಾಜೆ, ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀದರ ಕುತ್ಯಾಳ ಭಾಗವಹಿಸಲಿದ್ದಾರೆ. ಮೂರ್ಜೆ ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್‌ನ ಅಧ್ಯಕ್ಷ ಕೆ.ಎಸ್.ಗೋಪಾಲಕೃಷ್ಣ ಮೂರ್ಜೆ ಅಧ್ಯಕ್ಷತೆ ವಹಿಸುವರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ- ಶಾಸ್ತ್ರೀಯ ನೃತ್ಯ ಕಲಾ

ಪ್ರಕಾರಗಳು ನಡೆಯಲಿದೆ. ನ.27ರಂದು ಸಂಜೆ 6ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ, ಶ್ರೀ ಗಣೇಶ್ ಗೋಡಂಬಿ ಇಂಡಸ್ಟ್ರೀಸ್‌ನ ಪದ್ಮಾವತಿ ಉಪೇಂದ್ರ ಕಾಮತ್, ಅಂಕಣಕಾರರು ಹಾಗು ಜೇನುಕೃಷಿ ತಜ್ಞ ಕುಮಾರ್ ಪೆರ್ನಾಜೆ,ಕನಕಮಜಲು ಯುವಕ ಮಂಡಲದ ಅಧ್ಯಕ್ಷ ಚಂದ್ರಶೇಖರ ನೆಡಿಲು, ಕನಕಮಜಲು ಸ್ವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಸುಶೀಲ ಭಾಗವಹಿಸಲಿದ್ದಾರೆ. ಗುರುದೇವ ಲಲಿತಕಲಾ ಅಕಾಡೆಮಿಯ ಕಲಾ ನಿರ್ದೇಶಕರಾದ ಡಾ.ಚೇತನಾ ರಾಧಾಕೃಷ್ಣ ಪಿ‌.ಎಂ. ಅಧ್ಯಕ್ಷತೆ ವಹಿಸಲಿದ್ದಾರೆ. ದಾಮೋದರ ಕಣಜಾಲು ಕಾರ್ಯಕ್ರಮ

ನಿರೂಪಿಸುವರು.ಕನಕಮಜಲು ಯುವಕ ಮಂಡಲ, ಸ್ವರ್ಣ ಮಹಿಳಾ ಮಂಡಲ ಕನಕಮಜಲು ಸಹಕಾರದಲ್ಲಿ ಎರಡು ದಿನಗಳ ಅದ್ದೂರಿ ಶಾಸ್ತ್ರೀಯ ನೃತ್ಯೋತ್ಸವ ನಡೆಯಲಿದೆ ಎಂದು ಗುರುದೇವ ಲಲಿತಕಲಾ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಧಾಕೃಷ್ಣ ಪಿ.ಎಂ‌. ಹಾಗು
ಕಲಾ ನಿರ್ದೇಶಕರಾದ ಡಾ.ಚೇತನಾ ರಾಧಾಕೃಷ್ಣ ಪಿ‌.ಎಂ ತಿಳಿಸಿದ್ದಾರೆ
.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಪೆರುವಾಜೆಯಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಅಧಿಕಾರಿಗಳ ಗ್ರಾಮ ವಾಸ್ತವ್ಯ
next post
ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆ

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಅಶ್ವಿಜ್ ಅತ್ರೇಯನಿಗೆ ರಿಯಾಲಿಟಿ ಶೋದಲ್ಲಿ ಪ್ರಶಸ್ತಿ

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ