ಸುಳ್ಯ : ಇತಿಹಾಸ ಪ್ರಸಿದ್ಧ ಅಜ್ಞಾವರ ಮೇನಾಲ ಮಖಾಂ ಉರೂಸ್ ಹಾಗೂ ಐದು ದಿನಗಳ ಧಾರ್ಮಿಕ ಪ್ರಭಾಷಣ ಜನವರಿ 17 ರಿಂದ 21ರ ತನಕ ನಡೆಯಲಿದೆ ಎಂದು ಅಜ್ಜಾವರ ಮೇನಾಲ ಎಂಜೆಎಂ ಖತೀಬರಾದ ಹಸೈನಾರ್ ಫೈಝಿ ಕೊಡಗು ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಜಾತಿ-ಮತ ಭೇದವಿಲ್ಲದೆ ಸರ್ವ ಧರ್ಮೀಯರು ಗೌರವಿಸಲ್ಪಡುವ ಹಲವಾರು ರೋಗಗಳಿಗೆ ಪರಿಹಾರವನ್ನು ಬಯಸಿ ಬಂದ ಭಕ್ತಾದಿಗಳಿಗೆ ಪರಿಹಾರವನ್ನು ನೀಡುವ
ಅಲ್ಲಾಹುವಿನ ಸಾಮಿಪ್ಯ ಪುಣ್ಯಸ್ಥಳವಾದ ಅಜ್ಞಾವರ – ಮೇನಾಲ ದರ್ಗಾ ಶರೀಫ್ ನಲ್ಲಿ ಪ್ರತೀ ವರ್ಷ ನಡೆಸಿಕೊಂಡು ಬರುವ ಉರೂಸ್ ಸಮಾರಂಭವನ್ನು ಐದು ದಿನಗಳ ಕಾಲ ವಿಜೃಂಭಣೆಯಿಂದ ನಡೆಸಲು ನಿರ್ಧರಿಸಲಾಗಿದೆ.ಉರೂಸ್ ಕಾರ್ಯಕ್ರಮವು ಜ. 17 ರಂದು ಪ್ರಾರಂಭಗೊಂಡು ಜ. 21 ರಂದು ಸಮಾರೋಪ ಗೊಳ್ಳಲಿದೆ.ಉರೂಸ್ ಕಾರ್ಯಕ್ರಮದಲ್ಲಿ ಐದು ದಿನಗಳ ಧಾರ್ಮಿಕ ಮತಪ್ರವಚನ ಕಾರ್ಯಕ್ರಮವೂ ನಡೆಯಲಿದೆ.ಉರೂಸ್ ಸಮಾರಂಭದಲ್ಲಿ ಅನೇಕ ಉಲಮಾ ಉಮರಾಗಳು ಭಾಗವಹಿಸಲಿದ್ದು ಉರೂಸ್ ಸಮಾರಂಭ ಪ್ರಯುಕ್ತ ಸಮಾರೋಪ ಸಮಾರಂಭದಂದು ಸರ್ವ ಧರ್ಮ ಸೌಹಾರ್ದ ಕಾರ್ಯಕ್ರಮ ನಡೆಯಲಿದೆ.
ಜ. 17 ರಂದು ಅಜ್ಞಾವರ ಮುಹಿಯುದ್ದೀನ್ ಜುಮಾ ಮಸೀದಿ ಅಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು ದುವಾ ನೇತೃತ್ವ ವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಂತರ ಧಾರ್ಮಿಕ ಮತಪ್ರವಚನ ನಡೆಯಲಿದ್ದು, ಅಜ್ಜಾವರ ಎಂಜೆಎಂ ಖತೀಬರಾದ ಹಸೈನಾರ್ ಫೈಝಿ ಕೊಡಗು ಉಪನ್ಯಾಸ ನೀಡಲಿದ್ದಾರೆ.
ಜನವರಿ 18ರಂದು ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ಅಂಗಣದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಭಾಷಣಗಾರ ಅಬ್ದುಲ್ ಅಝೀಝ್ ಅಶ್ರಫಿ ಪಾಣತ್ತೂರ್ ಉಪನ್ಯಾಸ ನೀಡಲಿದ್ದಾರೆ.
ಜ.19ರಂದು ಮೇನಾಲ ದರ್ಗಾ ಶರೀಫ್ನಲ್ಲಿ ಮಗ್ರಿಬ್ ನಮಾಜು ಬಳಿಕ ಮಖಾಂ ಅಲಂಕಾರ ಮತ್ತು ದಿಕ್ರ್ ಹಲ್ಕ ನಡೆಯಲಿದೆ. ಕಾರ್ಯಕ್ರಮದ ನೇತೃತ್ವವನ್ನು ಹಕೀಂ ತಂಜಳ್ ಆದೂರು ನೆರವೇರಿಸಲಿದ್ದಾರೆ. ಖಲೀಲ್ ಹುದವಿ ಅಲ್ ಮಾಲಿಕಿ ಕಾಸರಗೋಡ್ ಉಪನ್ಯಾಸ ನೀಡಲಿದ್ದಾರೆ.
ಜ. 20 ರಂದು ಮೇನಾಲ ದರ್ಗಾ ಶರೀಫ್ ವಠಾರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಅಲ್ ಹಾಜ್ ಅಬ್ದುಲ್ ಮಜೀದ್ ಬಾಖವಿ ಉಪನ್ಯಾಸ ನೀಡಲಿದ್ದಾರೆ.ಜ.21 ರಂದು ರಾತ್ರಿ 7ಕ್ಕೆ ಸೌಹಾರ್ದ ಸಂಗಮ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ
ಊರಿನ ಸರ್ವಧರ್ಮೀಯರು ಭಾಗವಹಿಸಲಿದ್ದಾರೆ. ಖತೀಬರಾದ ಹಸೈನಾರ್ ಫೈಝಿ ಕೊಡಗು ಅವರ ದುವಾದೊಂದಿಗೆ ಆರಂಭ ಗೊಳ್ಳುವ ಸೌಹಾರ್ದ ಸಮಾರಂಭದ ಅಧ್ಯಕ್ಷತೆಯನ್ನು ದರ್ಗಾ ಶರೀಫ್ ಮೊಕ್ತೆಸರರಾದ ಎಂ. ಗುಡ್ಡಪ್ಪ ರೈ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಶ ಗಬ್ಬಲಡ್ಕ,ದ.ಕ.ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ನಿವೃತ್ತ ಉಪನ್ಯಸಕ ಜವರೇ ಗೌಡ, ಅಬ್ದುಲ್ ಅಝೀಝ್ ದಾರಿಮಿ ಚೊಕ್ಕಬೆಟ್ಟು ಹಾಗೂ ಸರ್ವ ಧರ್ಮೀಯರು ಭಾಗವಹಿಸಲಿದ್ದಾರೆ.
ನಂತರ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಎ ವಹಿಸಲಿದ್ದಾರೆ ಕಾರ್ಯಕ್ರಮದ ಉದ್ಘಾಟನೆಯನ್ನುದ.ಕ.ಜಿಲ್ಲಾ ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮ ಇದರ ಅಧ್ಯಕ್ಷರಾದ ಶೈಖುನಾ ಅಲ್ಹಾಜ್ ಎನ್.ಪಿ.ಎಂ ಝೈನುಲ್ ಆಬಿದೀನ್ ತಂಜಳ್ ಕುನ್ನುಂಗೈ ಕೇರಳ ನೆರವೇರಿಸಲಿದ್ದಾರೆ ಅಂತಾರಾಷ್ಟ್ರೀಯ ಪ್ರಭಾಷಣಗಾರ ಶಫೀಕ್ ಬದ್ರಿ ಅಲ್ ಬಾಖವಿ ಕಡೈಕಲ್ ಕೇರಳ ಉಪನ್ಯಾಸ ನೀಡಲಿದ್ದಾರೆ,
ಧಾರ್ಮಿಕ ಉಪನ್ಯಾಸವು ಪ್ರತೀದಿನ ರಾತ್ರಿ 8 ಕ್ಕೆ ಆರಂಭಗೊಳ್ಳಲಿದೆ. ಜ.21 ರಂದು ಸಮಾರೋಪ ಸಮಾರಂಭ ರಾತ್ರಿ ಕೂಟು ಪ್ರಾರ್ಥನೆ, ಮೌಲಿದ್ ಪಾರಾಯಣ ಮತ್ತು ಅನ್ನದಾನ ನೆರವೇರಲಿದೆ ಎಂದು ಹಸೈನಾರ್ ಫೈಝಿ ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಮಾಯತ್ ಕಮಿಟಿ ಉಪಾಧ್ಯಕ್ಷ ಅಂದಹಾಜಿ, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಎ, ಕೋಶಾಧಿಕಾರಿ ಶರೀಫ್ ರಿಲಾಕ್ಷ್ ಜೊತೆ ಕಾರ್ಯದರ್ಶಿ ಖಾದರ್ ಎನ್, ಜಮಾಯತ್ ಸದಸ್ಯ ಅಬ್ದುಲ್ಲಾ ಎ. ಉಪಸ್ಥಿತರಿದ್ದರು.