ಸುಳ್ಯ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫರವರ ಜನ್ಮದಿನಾಚರಣೆಯ ಪ್ರಯುಕ್ತ ಮದ್ರಸ, ದರ್ಸ್ ವಿದ್ಯಾರ್ಥಿಗಳ 6 ದಿನಗಳ ಕಲಾ ಸಾಹಿತ್ಯ, ಸಾoಸ್ಕೃತಿಕ ಪ್ರತಿಭಾ ಪ್ರದರ್ಶನಕ್ಕೆ ಗಾಂಧಿನಗರ ಮದರಸ ವಠಾರದಲ್ಲಿ ಚಾಲನೆ ನೀಡಲಾಯಿತು.ಮುಹಿಯದ್ದೀನ್ ಜುಮ್ಮಾ ಮಸ್ಜಿದ್ ತರ್ಬಿಯತುಲ್ ಇಸ್ಲಾಂ ಜಮಾಅತ್ ಕಮಿಟಿ ಮತ್ತು ಮುನವ್ವಿರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸ ಜಂಟಿ ಆಶ್ರಯದಲ್ಲಿ ನಡೆಯುವ ಮೀಲಾದ್
ಸಂಭ್ರಮಕ್ಜೆ ಗಾಂಧಿನಗರ ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ದುಃವಾ ಪ್ರಾರ್ಥನೆಗೈದರು,
ಅಧ್ಯಕ್ಷತೆ ಯನ್ನು ಜಮಾಅತ್ ಅಧ್ಯಕ್ಷ ಹಾಜಿ ಕೆ. ಎಂ. ಮುಸ್ತಫ ವಹಿಸಿದ್ದರು. ವೇದಿಕೆಯಲ್ಲಿ ಉಪಾಧ್ಯಕ್ಷ ಹಾಜಿ ಕೆ. ಎಂ. ಮಹಮ್ಮದ್ ಕೆಎಂಎಸ್, ಪ್ರಧಾನ ಕಾರ್ಯದರ್ಶಿ ಹಾಜಿ ಐ ಇಸ್ಮಾಯಿಲ್, ಖಜಾಂಚಿ ಹಾಜಿ ಮುಹಿಯದ್ದೀನ್ ಫ್ಯಾನ್ಸಿ, ಮದರಸ ಉಸ್ತುವಾರಿಗಳಾದ ಕೆ. ಬಿ. ಅಬ್ದುಲ್ ಮಜೀದ್, ಹಮೀದ್ ಬೀಜಕೊಚ್ಚಿ, ನಿರ್ದೇಶಕರೂ, ನಗರ ಪಂಚಾಯತ್ ಸದಸ್ಯ ಕೆ. ಎಸ್. ಉಮ್ಮರ್, ಅನ್ಸಾರುಲ್ ಮುಸ್ಲಿಮೀನ್ ಅಧ್ಯಕ್ಷ ಹಾಜಿ ಅಬ್ದುಲ್ ಶುಕೂರ್, ಅನ್ಸಾರಿಯಾ ಎಜುಕೇಶನ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ನಗರ ಪಂಚಾಯತ್ ಸದಸ್ಯ ಶರೀಫ್ ಕಂಠಿ, ಸದರ್ ಉಸ್ತಾದ್ ಇಬ್ರಾಹಿಂ ಸಖಾಫಿ ಪುಂಡೂರ್ ಮೊದಲಾದವರು ಉಪಸ್ಥಿತರಿದ್ದರು ಸಹಾಯಕ ಸದರ್ ಉಸ್ತಾದ್ ಅಬ್ದುಲ್ ಖಾದರ್ ಮುಸ್ಲಿಯಾರ್ ಸ್ವಾಗತಿಸಿ ನಿಸಾರ್ ಸಖಾಫಿ ವಂದಿಸಿದರು, ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಕಾರ್ಯಕ್ರಮ ನಿರೂಪಿಸಿದರು