ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ಮಾಡಿದರು. ವಿಧಾನಸೌಧದಲ್ಲಿ ಸಿಎಂ ಭೇಟಿಯಾಗಿ ಶುಭಾಶಯ ತಿಳಿಸಿದ ಅವರು ಕ್ಷೇತ್ರದ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಅಭಿವೃದ್ಧಿ ಬೇಡಿಕೆಗಳನ್ನು ಈಡೇರಿಸಲು ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.








