ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವರು ಕಡಬ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರು ವಿವಿಧ ಬೇಡಿಕೆಗಳ ಅಹವಾಲು ಸಲ್ಲಿಸಿದರು. ಅಕ್ರಮ ಸಕ್ರಮ ಮಂಜೂರು, ಧಾರ್ಮಿಕ ಕ್ಷೇತ್ರ, ಗ್ರಾಮೀಣ ರಸ್ತೆಗೆ ಅನುದಾನ, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ
ಡಯಾಲಿಸಿಸ್ ಚಿಕಿತ್ಸೆ ಹಾಗೂ ಮತ್ತಿತರ ಸಾರ್ವಜನಿಕ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದರು. ವಿವಿಧ ವೈಯುಕ್ತಿಕ ಬೇಡಿಕೆಗಳ ಬಗ್ಗೆಯೂ ಮನವಿ ಸಲ್ಲಿಸಿದರು. ನಂತರ ಮನವಿ ಪರಿಶೀಲಿಸಿ ಆದಷ್ಟು ಶೀಘ್ರವಾಗಿ ಸಾರ್ವಜನಿಕರ ಸಮಸ್ಯೆಗಳನ್ನು ಸರಿಪಡಿಸಿಕೊಡಬೇಕಾಗಿ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಈ ಸಂದರ್ಭದಲ್ಲಿ ಕಡಬ ತಹಶೀಲ್ದಾರ್ ಪ್ರಭಾಕರ್ ಕಜೂರೆ, ಡಿ.ಟಿ. ಮನೋಹರ್, ಕಡಬ ಸಮುದಾಯ ಆರೋಗ್ಯ ಕೇಂದ್ರ ವೈಧ್ಯಾಧಿಕಾರಿ ಸುಚಿತ್ರ ರಾವ್ ಉಪಸ್ಥಿತರಿದ್ದರು.