ಸುಳ್ಯ:ಸುಳ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಸುಳ್ಯದ ಅಂಬೇಡ್ಕರ್ ಭವನವನ್ನು ಶಾಸಕಿ ಭಾಗೀರಥಿ ಮುರುಳ್ಯ ಅವರು ವೀಕ್ಷಣೆ ಮಾಡಿದರು. ಬಳಿಕ ಅಧಿಕಾರಿಗಳ ಸಭೆ ಶಾಸಕಿ ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಅಂಬೆಡ್ಕರ್ ಭವನ ವೀಕ್ಷಣೆ ಬಳಿಕ ಅಧಿಕಾರಿಗಳ ಸಭೆ ನಡೆಸಿದ ಶಾಸಕಿ ಈಗಾಗಲೇ ಒಟ್ಟು 5 ಕೋಟಿ ಅನುದಾನದಲ್ಲಿ ಭವನ ನಿರ್ಮಾಣಕ್ಕೆ
ಅಂದಾಜು ಪಟ್ಟಿ ತಯಾರಿಸಲಾಗಿದ್ದು ಅದರಂತೆ ಎರಡು ಕೋಟಿ ರೂಪಾಯಿಗಳಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಇನ್ನುಳಿದ ಅಭಿವೃದ್ಧಿಗೆ ಸಮಾಜ ಕಲ್ಯಾಣ ಇಲಾಖೆಗೆ ಕೋರಿಕೊಂಡ ಮೇರೆಗೆ ಸುಮಾರು 3 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಕಾಮಗಾರಿ ತ್ವರಿತವಾಗಿ ನಡೆಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಹಾಗೂ ನೀಲಿನಕ್ಷೆ ಮತ್ತು ಅಂದಾಜು ಪಟ್ಟಿ ತಯಾರಿಸಿ ಕೂಡಲೇ ನೀಡಬೇಕು ಹಾಗೂ ಮುಂದಿನ ತಿಂಗಳಿನಲ್ಲೆ ಟೆಂಡರ್ ಹಂತಕ್ಕೆ ಬಂದು ಡಿಸೆಂಬರ್ ತಿಂಗಳಿನಲ್ಲಿ ಕಾಮಗಾರಿ ಪ್ರಾರಂಭವಾಗುವಂತೆ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಮುಂದಿನ ಬಾರಿಯ ಅಂಬೆಡ್ಕರ್ ಜಯಂತಿ ಕಾರ್ಯಕ್ರಮವು ನೂತನವಾಗಿ ನಿರ್ಮಾಣವಾದ ಭವನದಲ್ಲಿ ಆಗುವಂತೆ ಮಾಡಲು ಅಧಿಕಾರಿಗಳು ಸಹಕರಿಸಬೇಕು ಎಂದು ಹೇಳಿದರು.

ಶಾಸಕರ ಅಧ್ಯಕ್ಷತೆಯಲ್ಲಿ ಕಾಮಗಾರಿ ಪರಿಶೀಲನೆ ಸಮಿತಿ ರಚನೆ.
ಶಾಸಕಿ ಮಾತನಾಡಿ ಅಂಬೆಡ್ಕರ್ ಭವನದ ಕುರಿತಾಗಿ ಪ್ರತಿಯೊಬ್ಬರು ಪ್ರಶ್ನೆಯನ್ನು ಎತ್ತುದಿದ್ದು ಅಲ್ಲದೇ ಮುಂದೇ ಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಲು ಸಾರ್ವಜನಿಕರು ಮತ್ತು ನಾಯಕರನ್ನು ಸೇರಿಸಿಕೊಂಡು ಸಮಿತಿ ರಚಿಸುವ ಕುರಿತಾಗಿ ಮಾಹಿತಿ ನೀಡಿ ಮುಂದಿನ ಸೋಮವಾರ ಮತ್ತೊಮ್ಮೆ ಸಭೆ ಸೇರಿ ಚರ್ಚಿಸೋನ ಎಂದು ಹೇಳಿದರು ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ಗಳಾದ ಗೋಪಾಲ,ಪರಮೇಶ್ವರ,
ಜಿಲ್ಲಾ ಪಂಚಾಯತ್ ಎಂಜಿನಿಯರ್ಗಳಾದ ಮಣಿಕಂನ್, ಫಯಾಝ್ ಅಹಮ್ಮದ್ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಗಳಾದ ನಂದಿನಿ , ಸ್ಮಿತಾ, ನಿರ್ಮಿತಿ ಕೇಂದ್ರ ಎಂಜಿನಿಯರ್ ಹರೀಶ್ , ಗುತ್ತಿಗೆದಾರ ಯೋಗೀಶ್ ಪೂಜಾರಿ, ಪ್ರಮುಖರಾದ ಎಸ್.ಎನ್ ಮನ್ಮಥ , ಹರೀಶ್ ಕಂಜಿಪಿಲಿ ,
ಸುಭೋದ್ ಶೆಟ್ಟಿ ಮೇನಾಲ ,ಚನಿಯ ಕಲ್ತಡ್ಕ , ಬಾಲಕೃಷ್ಣ ಕೀಲಾಡಿ , ಪ್ರಸಾದ್ ಕಾಟೂರು ಮತ್ತಿತರರು ಉಪಸ್ಥಿತರಿದ್ದರು.















