ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮೇ 19ರ ಮಂಗಳವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಪಡೀಲ್ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ನಾಳೆ ಬೆಳಗ್ಗೆ
10ರಿಂದ ಮಧ್ಯಾಹ್ನ 12ಗಂಟೆಯವರೆಗೆ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕರು ಹಾಗೂ ಕ್ಷೇತ್ರದ ಮತದಾರರು ತಮ್ಮ ಸಮಸ್ಯೆಗಳು ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ಚರ್ಚಿಸಬಹುದಾಗಿದೆ. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಸಂಸದರ ಗಮನಕ್ಕೆ ತರಬಹುದು ಎಂದು ಸಂಸದ ಕ್ಯಾ. ಚೌಟ ಅವರ ಕಚೇರಿಯು ಪ್ರಕಟಣೆಯಲ್ಲಿ ತಿಳಿಸಿದೆ.














