ನವದೆಹಲಿ: ಹಳೆಯ ಭವನಕ್ಕೆ ವಿದಾಯ ಹೇಳುವ ಭಾಗವಾಗಿ ಸಂಸದರು ಗುಂಪು ಫೋಟೊ ಕ್ಲಿಕ್ಕಿಸಿಕೊಂಡರು. ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಸ್ಪೀಕರ್ ಓಂ ಬಿರ್ಲಾ ಅವರು ಮೊದಲ ಸಾಲಿನ ಮಧ್ಯದಲ್ಲಿ ಆಸೀನರಾದರು.
ಅವರೊಟ್ಟಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣ ಸಚಿವ ರಾಜನಾಥ ಸಿಂಗ್, ರಾಜ್ಯಸಭೆಯ
ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಸಮಾಜವಾದಿ ಪಕ್ಷದ ಸಂಸದ ಶಫೀಕ್ ಉರ್ ರಹಮಾನ್ ಬಾರ್ಕ್, ಎನ್ಸಿಪಿ ನಾಯಕ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ನ ಫಾರೂಕ್ ಅಬ್ದುಲ್ಲಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮೊದಲ ಸಾಲಿನಲ್ಲಿಯೇ ಕುಳಿತುಕೊಂಡರು. ಸಂಸದರು ಬಣ್ಣ ಬಣ್ಣದ ಉಡುಪುಗಳನ್ನು ತೊಟ್ಟು ಆಗಮಿಸಿದ್ದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೊನೆಯಿಂದ ಎರಡನೇ ಸಾಲಿನಲ್ಲಿ ನಿಂತುಕೊಂಡರು. ಅವರೊಟ್ಟಿಗೆ ಮನೀಶ್ ತಿವಾರಿ ಇದ್ದರು. ಮೊದಲಿಗೆ ಮೇಲ್ಮನೆ ಸದಸ್ಯರ ಫೋಟೊ ಕ್ಲಿಕ್ಕಿಸಲಾಯಿತು. ಬಳಿಕ ಕೆಳಮನೆಯ ಸದಸ್ಯರ ಪೊಟೊ ತೆಗೆಯಲಾಯಿತು.