ಸುಳ್ಯ:ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯನ್ನು ಸುಳ್ಯ ಗೌಡರ ಯುವ ಸೇವಾ ಸಂಘವು ರಾಜ್ಯ ಒಕ್ಕಲಿಗರ ಸಂಘದ ಸಹಕಾರದೊಂದಿಗೆ ಸುಳ್ಯದಲ್ಲಿ ಜು. 12 ಶನಿವಾರದಂದು ಶ್ರೀ ವೆಂಕಟರಮಣ ಸೊಸೈಟಿಯ ಮದುವೆಗದ್ದೆ ಬೋಗಪ್ಪ ಗೌಡ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ನಾಡಪ್ರಭು ಕೆಂಪೇಗೌಡರ ಜನ್ಮದಿನಾಚರಣೆಯ ಪ್ರಯುಕ್ತ ಸುಳ್ಯದಲ್ಲಿ
ರಾಜಕೀಯ, ಸಾಮಾಜಿಕ, ಸಹಕಾರಿ, ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ ನಾಡನ್ನು ಕಟ್ಟುತ್ತಿರುವ ಹಿರಿಯರಾದ ಸಹಕಾರಿರತ್ನ ನಿತ್ಯಾನಂದ ಮುಂಡೋಡಿಯವರಿಗೆ 2025ರ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ. ವಿ. ನೆರವೇರಿಸಲಿದ್ದಾರೆ, ಹಿರಿಯ ಸಹಕಾರಿ ಪಿ. ಸಿ. ಜಯರಾಮ ಕೆಂಪೇಗೌಡರವರ ಬಗ್ಗೆ ಉಪನ್ಯಾಸ ಹಾಗೂ ನಿತ್ಯಾನಂದ ಮುಂಡೋಡಿಯವರ ಬಗ್ಗೆ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ಇನ್ನೋರ್ವ ಹಿರಿಯ ಸಹಕಾರಿ ಜಾಕೆ ಮಾಧವ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ತಾಲೂಕು ಗೌಡ ಯುವ ಸೇವಾ ಸಂಘ ಮತ್ತು ಮಹಿಳಾ ಘಟಕ, ತರುಣ ಘಟಕ ಹಾಗೂ ಗ್ರಾಮ ಸಮಿತಿಗಳ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ. ಎಸ್. ಗಂಗಾಧರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ .