ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ನಿಂತಿಕಲ್ಲಿನ ಧರ್ಮಶ್ರೀ ಆರ್ಕೆಡ್ನಲ್ಲಿ ಎ.9ರಂದು ಆಯೋಜಿಸಲು ನಿರ್ಧರಿಸಲಾಗಿದೆ. ಕಡಬದಲ್ಲಿ ನಡೆದ
ಅಭಿಮಾನಿ ಬಳಗದ ಪ್ರಮುಖರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಭಿಮಾನಿ ಬಳಗದ ಪ್ರಕಟಣೆ ತಿಳಿಸಿದೆ. ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ಮತ್ತು ಬಿ ಫಾರಂ ನೀಡಬೇಕು. ಸುಳ್ಯದಲ್ಲಿ ಕಾಂಗ್ರೆಸ್ ಜಯ ಗಳಿಸಬೇಕು. ಮತ್ತು ಪ್ರಾಮಾಣಿಕ ಕಾರ್ಯಕರ್ತರಿಗೆ ಕಾಂಗ್ರೆಸ್ ಗೆಲುವಿನ ಮೂಲಕ ನ್ಯಾಯ ದೊರಕಿಸಬೇಕು ಎಂಬ ಆಶಯದೊಂದಿಗೆ ಸಮಾವೇಶ ಹಮ್ಮಿಕೊಳ್ಳಲಾಗಿದೆ. ನಂದಕುಮಾರ್ ಅವರಿಗೆ ಬಿ ಫಾರಂ ಕೈ ತಪ್ಪಿದ್ದಲ್ಲಿ ಕಾರ್ಯಕರ್ತರ ಮುಂದಿನ ನಡೆಯ ಕುರಿತು ಸಮಾವೇಶದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಂದು ಸಂಘಟಕರು ತಿಳಿಸಿದ್ದಾರೆ.
ಸಭೆಯಲ್ಲಿ ಮಾಜಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಬಳ್ಳೇರಿ, ಗಣೇಶ್ ಕೈಕುರೆ, ವಿಜಯಕುಮಾರ್ ಶೆಟ್ಟಿ, ಮಾಜಿ ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಪ್ರವೀಣ್ ಕೆಡೆಂಜಿಗುತ್ತು, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಆಶಾ ಲಕ್ಷ್ಮಣ, ಸಚಿನ್ ರಾಜ್ ಶೆಟ್ಟಿ ರಾಮಕೃಷ್ಣ ಹೊಲ್ಲಾರ,ಗೋಕುಲ್ ದಾಸ್ ಸುಳ್ಯ, ಭವಾನಿಶಂಕರ್ ಕಲ್ಮಡ್ಕ, ಶಶಿಧರ್ ಎಂ ಜೆ, ಶೋಭಿತ್ ನಾಯರ್, ಗೋಪಾಲ ಕೃಷ್ಣ ಭಟ್, ರವೀಂದ್ರ ಕುಮಾರ್ ರುದ್ರಪಾದ, ಸಧೀರ್ ದೇವಾಡಿಗ, ಮಹಮ್ಮದ್ ಪೈಜಲ್, ಜಗನ್ನಾಥ ಪೂಜಾರಿ ಪೆರುವಾಜೆ, ಮಹಮ್ಮದ್ ಇಕ್ಫಾಲ್ ಮೊದಲಾದವರು ಉಪಸ್ಥಿತರಿದ್ದರು.