ಸುಳ್ಯ: ಸುಳ್ಯದಲ್ಲಿ ಪ್ರಥಮ ಬಾರಿಗೆ ಪ್ರೊ ಮಾದರಿಯ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ ನ.17 ಮತ್ತು 18ರಂದು ಸುಳ್ಯದ ಚೆನ್ನಕೇಶವ ದೇವಸ್ಥಾನದ ಬಳಿಯಲ್ಲಿರುವ ಪ್ರಭು ಮೈದಾನದಲ್ಲಿ ನಡೆಯಲಿದೆ. ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ 8ನೇ ವಾರ್ಷಿಕೋತ್ಸವದ ಅಂಗವಾಗಿ ಅಮೆಚೂರು ಕಬಡ್ಡಿ ಫೆಡರೇಶನ್ ಆಫ್ ಇಂಡಿಯಾ ಸಹಭಾಗಿತ್ವದಲ್ಲಿ ನಡೆಯುವ ಪಂದ್ಯಾಟಕ್ಕೆ ಭರದ ಸಿದ್ಧತೆಗಳು
ನಡೆಯುತಿದೆ. ಪಂದ್ಯಾಟ ನಡೆಯುವ ಗ್ರೌಂಡ್ನ, ಒಳಾಂಗಣ ಕ್ರೀಡಾಂಗಣ ನಿರ್ಮಾಣದ, ಗ್ಯಾಲರಿ ನಿರ್ಮಾಣದ ಕೆಲಸ ಆರಂಭಗೊಂಡಿದೆ.
ರಾಷ್ಟ್ರೀಯ ಮಟ್ಟದ ಆಟಗಾರರನ್ನು ಒಳಗೊಂಡ 8 ಆಹ್ವಾನಿತ ತಂಡಗಳ ಎ ಗ್ರೇಡ್ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟವನ್ನು ಆಯೋಜನೆ ಮಾಡಲಾಗಿದ್ದು ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಹಿಮಾಚಲ ಪ್ರದೇಶ, ಹರಿಯಾಣ ಹಾಗೂ ದೆಹಲಿ ರಾಜ್ಯದ ಪುರುಷರ ತಂಡಗಳು ಭಾಗವಹಿಸಲಿದೆ.
![](https://thesulliamirror.com/wp-content/uploads/2023/10/IMG_20231017_205034.jpg)
ಪಂದ್ಯಾಟವು ಸಂಪೂರ್ಣ ಪ್ರೊ ಮಾದರಿಯಲ್ಲಿ ಲೀಗ್ ಪಂದ್ಯಾಟ ನಡೆಯಲಿದ್ದು. ಪ್ರೊ ಕಬಡ್ಟಿಯಲ್ಲಿನ ಎಲ್ಲಾ ಆಧುನಿಕ ತಂತ್ರಜ್ಞಾನವನ್ನು, ನಿಯಮಗಳನ್ನು ಅಳವಡಿಸಲಾಗುವುದು. ಪ್ರೊ ಕಬಡ್ಡಿ ತಂಡದ ಆಟಗಾರರು, ರಾಷ್ಟ್ರೀಯ ಆಟಗಾರರು ಭಾಗವಹಿಸಲಿದ್ದಾರೆ. 4 ಸಾವಿರ ಮಂದಿಗೆ ಕುಳಿತು ಕೊಳ್ಳಬಹುದಾದ ಗ್ಯಾಲರಿ ನಿರ್ಮಾಣ ಮಾಡಲಾಗುವುದು. ಇಂಡೋರ್ ಸ್ಟೇಡಿಯಂ ಮಾದರಿಯಲ್ಲಿ ಕ್ರೀಡಾಂಗಣವನ್ನು ಸಜ್ಜುಗೊಳಿಸಲಾಗುವುದು. ಎಲ್.ಇ.ಡಿ ಪರದೆಗಳನ್ನು ಅಳವಡಿಸಲಾಗುವುದು. ಆತ್ಯಾಧುನಿಕ ಲೈಟಿಂಗ್ಸ್ ಮತ್ತು ಅಲಂಕಾರವನ್ನು ಒಳಗೊಂಡ ಆಕರ್ಷಕ ವೇದಿಕೆಯನ್ನು ನಿರ್ಮಾಣ ಮಾಡಲಾಗುವುದು.
ಇದರ ಕಾಮಗಾರಿ ಆರಂಭಗೊಂಡಿದೆ.
ವಿಜೇತ ತಂಡಗಳಿಗೆ ಪ್ರಥಮ ಬಹುಮಾನ 1 ಲಕ್ಷ ಮತ್ತು ಟ್ರೋಫಿ, ದ್ವಿತೀಯ ಬಹುಮಾನ 65,000 ಮತ್ತು ಟ್ರೋಫಿ, ತೃತೀಯ ಬಹುಮಾನ 35,000 ಮತ್ತು ಟ್ರೋಫಿ, ಚತುರ್ಥ ಬಹುಮಾನ 35,000 ಮತ್ತು ಟ್ರೋಫಿ ನೀಡಲಾಗುವುದು. ಎಂದು ವಿವರ ನೀಡಿದರು.
ಪಂದ್ಯಾಟ ಸಹಾಯಾರ್ಥ ಲಕ್ಕಿಡಿಪ್ ಕೂಪನ್ ಆಯೋಜಿಸಲಾಗಿದೆ ಎಂದು ಸಂಘಟನಾ ಸಮಿತಿಯ ಪದಾಧಿಕಟರಿಗಳು ತಿಳಿಸಿದ್ದಾರೆ.