ಸುಳ್ಯ:ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ, ಮಡಿಕೇರಿ ಇದರ ಆಶ್ರಯದಲ್ಲಿ 8 ದಿನಗಳ Pre RDC II ಮತ್ತು CATC ಶಿಬಿರದ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷ ಡಾ.ಕೆ.ವ.ಚಿದಾನಂದ ಮಾತನಾಡಿ ಎನ್ಸಿ ಸಿ ಜೀವನಕ್ಕೆ
ಶಿಸ್ತನ್ನು ಕಲಿಸುತ್ತದೆ. ಈ ರೀತಿಯ ಶಿಸ್ತನ್ನು ಜೀವನದಲ್ಲಿ ಅಳವಡಿಸಿ ಕೊಂಡಾಗ ಸತ್ಪ್ರಜೆಯಾಗಲು ಸಾಧ್ಯ ಎಂದರು.ಉದ್ಘಾಟನೆಯನ್ನು ನೆರವೇರಿಸಿ ಶಿಬಿರಕ್ಕೆ ಚಾಲನೆ ನೀಡಿದ 19 ಕರ್ನಾಟಕ ಬೆಟಾಲಿಯನ್ ಎನ್ಸಿಸಿ ಮಡಿಕೇರಿಯ ಕಮಾಂಡಿಂಗ್ ಆಫೀಸರ್ ಕರ್ನಲ್ ಜೆಫ್ರಿನ್ ಗಿಲ್ ಬರ್ಟ್ ಅರನ್ಹಾ ಮಾತನಾಡಿ “ಶಿಸ್ತು, ಸಮಯಪಾಲನೆ, ಸಾಹಸ ಪ್ರವೃತ್ತಿ, ಜವಾಬ್ದಾರಿ, ಸಹಕಾರ ಇಂತಹ ಜೀವನ ಮೌಲ್ಯಗಳನ್ನು ಕೇವಲ ಸೈನ್ಯದಲ್ಲಿ ಮಾತ್ರವಲ್ಲ, ಜೀವನದಲ್ಲಿ ಅಳವಡಿಸಿಕೊಳ್ಳಲು ಎನ್ ಸಿ ಸಿ ಅಗತ್ಯ. ಎನ್ ಸಿ ಸಿ ಯಿಂದ ಹಾಗೂ ಶಿಬಿರಗಳಿಂದ ಪಡೆದ ಒಳ್ಳೆಯ ವಿಚಾರಗಳನ್ನು ಬದುಕಿನುದ್ದಕ್ಕೂ ಅಳವಡಿಸಿಕೊಂಡಾಗ ಮಾತ್ರ ಇಂತಹ ಶಿಬಿರಗಳು ಸಾರ್ಥಕ್ಯವನ್ನು ಪಡೆದುಕೊಳ್ಳುತ್ತವೆ ಎಂದರು.
ಲೆಫ್ಟಿನೆಂಟ್ ಕರ್ನಲ್ ಚಾಕೋ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ಬೆಟಾಲಿಯನ್ಗಳ ಅಧಿಕಾರಿಗಳು, ವಿವಿಧ ಕಾಲೇಜಿನ ಅಸೋಸಿಯೇಟ್ ಎನ್ಸಿಸಿ ಆಫೀಸರ್ಗಳು ಹಾಗೂ ಮಂಗಳೂರು, ಮಡಿಕೇರಿ, ಉಡುಪಿ, ಶಿವಮೊಗ್ಗ ಜಿಲ್ಲೆಗಳ 425 ಎನ್ ಸಿ ಸಿ ಕೆಡೆಟ್ ಗಳು ಸಮಾರಂಭದಲ್ಲಿ ಭಾಗವಹಿಸಿದ್ದರು