The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ವಾಹನಗಳ ವೇಗಕ್ಕೆ ಸಿಲುಕಿ ಹೆದ್ದಾರಿಯಲ್ಲಿ ಮೂಕ ಪ್ರಾಣಿಗಳ ಮಾರಣ ಹೋಮ: ಪ್ರಾಣಿಗಳನ್ನು ರಸ್ತೆಗೆ ಬಿಡದಂತೆ ಗ್ರಾ.ಪಂ. ಮನವಿ

by ದಿ ಸುಳ್ಯ ಮಿರರ್ ಸುದ್ದಿಜಾಲ September 18, 2022
by ದಿ ಸುಳ್ಯ ಮಿರರ್ ಸುದ್ದಿಜಾಲ September 18, 2022
Share this article

ಸಂಪಾಜೆ: ಅಪರಿಚಿತ ವಾಹನಗಳು ಡಿಕ್ಕಿ ಹೊಡೆದು ದನಗಳು, ನಾಯಿಗಳು, ಬೆಕ್ಕುಗಳು ಸೇರಿದಂತೆ ಸಾಕು ಪ್ರಾಣಿಗಳು ಸಾಯುವ ಹೃದಯ ವಿದ್ರಾಹಕ ಘಟನೆ ಸಂಪಾಜೆ ಭಾಗದಲ್ಲಿ ಪದೇ ಪದೇ ಕಂಡು ಬರುತ್ತದೆ. ಕಳೆದ ಕೆಲವು ದಿನಗಳಿಂದ ಸಂಪಾಜೆ, ಕಲ್ಲುಗುಂಡಿ ಭಾಗದಲ್ಲಿ ಹತ್ತಾರು ದನಗಳು ರಾತ್ರಿಯ ಸಮಯದಲ್ಲಿ ಸಿಡಿಲಿನಂತೆ ಓಡುವ ವಾಹನಗಳ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವೇಗಕ್ಕೆ ಸಿಲುಕಿ ಬಲಿಯಾಗಿದೆ. ಕಳೆದ ಒಂದು ತಿಂಗಳಲ್ಲಿ ಸಂಪಾಜೆ ಗ್ರಾಮವೊಂದರಲ್ಲೇ 15 ಕ್ಕೂ ಹೆಚ್ಚು ಪ್ರಾಣಿಗಳು ಅಪರಿಚಿತ ವಾಹನಗಳು ಡಿಕ್ಕಿ ಹೊಡೆದು ಸತ್ತಿದೆ ಎನ್ನುತ್ತಾರೆ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್. ರಾತ್ರಿ ಹಗಲೆನ್ನದೆ ಸದಾ ವಾಹನ ನಿಬಿಡವಾಗಿರುವ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳಿಗೆ ದನಗಳನ್ನು ಮತ್ತು ಇತರ ಪ್ರಾಣಿಗಳನ್ನು ಎಗ್ಗಿಲ್ಲದೆ ಬಿಡುವ ಕಾರಣ ಈ ಮೂಕ ಪ್ರಾಣಿಗಳ ಮಾರಣ ಹೋಮ ನಡೆಯುತಿದೆ.ರಾತ್ರಿಯ ವೇಳೆ ಖಾಲಿ ಇರುವ ರಸ್ತೆಯಲ್ಲಿ ದೂರ ಪ್ರಯಾಣಿಸುವ ವಾಹನಗಳು ಶರವೇಗದಲ್ಲಿ ಓಡುತ್ತಿರುತ್ತವೆ. ಈ ಸಂದರ್ಭದಲ್ಲಿ ಈ ಪ್ರಾಣಿಗಳು ಅಡ್ಡ ಬಂದರೆ , ವೇಗವಾಗಿ ಬರುವ ಈ ವಾಹನಗಳು ಡಿಕ್ಕಿ ಹೊಡೆದಾಗ ಪ್ರಾಣಿಗಳ ದೇಹ ಛಿದ್ರ ಛಿದ್ರವಾಗಿ ಅವು ಪ್ರಾಣ ಬಿಡುತ್ತದೆ. ಈ ರೀತಿ ವಾಹನ ಡಿಕ್ಕಿಯಾಗಿ ಛಿದ್ರಗೊಂಡು ದನಗಳು ಸತ್ತಿರುವ ಭೀಭತ್ಸ ದೃಶ್ಯ ಮನ ಕಲಕುವಂತಿರುತ್ತದೆ. ರಾತ್ರಿಯ ವೇಳೆ ವೇಗವಾಗಿ ಚಲಿಸುವ ವಾಹನಗಳಿಗೆ

ಈ ರೀತಿ ರಸ್ತೆಯಲ್ಲಿ ತಿರುಗಾಡುವ ಪ್ರಾಣಿಗಳು ಸಿಲುಕಿ ಕೊಳ್ಳುತ್ತವೆ . ದ್ವಿಚಕ್ರ ವಾಹನ ಸವಾರರಿಗಂತೂ ಈ ದನಗಳು, ನಾಯಿಗಳು ಅಡ್ಡ ಬಂದು ಅಪಘಾತ ಸಂಭವಿಸುವುದೂ ಇದೆ. ಈ ರೀತಿ ವಾಹನಗಳು ಡಿಕ್ಕಿ ಹೊಡೆದು ಸತ್ತು ರಸ್ತೆಯಲ್ಲಿ ಬಿದ್ದಾಗ ಅವುಗಳನ್ನು ವಿಲೇವಾರಿ ಮಾಡುವುದು ಗ್ರಾಮ ಪಂಚಾಯತ್‌ಗೆ ದೊಡ್ಡ ತಲೆ ನೋವಾಗಿದೆ. ದನಗಳು ಸತ್ತರೆ ಅವುಗಳ ವಾರೀಸುದಾರರು ತಿರುಗಿ ನೋಡುವುದಿಲ್ಲ.

“ದನಗಳು, ನಾಯಿ, ಬೆಕ್ಕು ಸೇರಿದಂತೆ ಮೂಕ ಪ್ರಾಣಿಗಳನ್ನು ದಯ ಮಾಡಿ ಯಾರೂ ರಸ್ತೆಗೆ ಬಿಡಬಾರದು ಎಂದು ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ಮನವಿ ಮಾಡಿದ್ದಾರೆ. ಈ ರೀತಿ ಜಾನುವಾರುಗಳನ್ನು ರಸ್ತೆಗೆ ಮತ್ತು ಸಾರ್ವಜನಿಕ ಸ್ಥಳಗಳಿಗೆ ಬಿಡುವುದು ಕಂಡು ಬಂದರೆ ಅದರ ವಾರೀಸುದಾರರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇರುವುದು ಮತ್ತು ಟಯರ್ ಫ್ಯಾಕ್ಟರಿ ಆಗದೇ ಇದ್ದದು ದೊಡ್ಡ ವೈಫಲ್ಯ: ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮನದಾಳದ‌ ಮಾತು
next post
ಮಾಜಿ ಮುಖ್ಯಮಂತ್ರಿಗಳ ಕೃಷಿ ಪ್ರೀತಿ: ತೋಟದ ಮಧ್ಯೆ ಸಿಗುವ ನೆಮ್ಮದಿ, ಸಂತಸ ಎಲ್ಲಾ ಅಧಿಕಾರಕ್ಕಿಂತ ಮಿಗಿಲು: ಡಿ‌.ವಿ.ಎಸ್ ಅಭಿಮತ

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಜೂ.7 ರಿಂದ ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆ...

June 6, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ