ಸುಳ್ಯ: ಎಸ್ಕೆ ಎಸ್ ಎಸ್ ಎಫ್ ಗೂನಡ್ಕ ಶಾಖೆ ವತಿಯಿಂದ ಸುಳ್ಯ ತಾಲೂಕಿನಲ್ಲಿ ಪ್ರಥಮ ಬಾರಿಗೆ ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲಿಸ್ ಹಾಗೂ ಮಜ್ಲಿಸ್ನ್ನೂರ್ ವಾರ್ಷಿಕ ಕಾರ್ಯಕ್ರಮ ಮಾರ್ಚ್ 19ರಂದು ಪೇರಡ್ಕ ದರ್ಗಾ ಶರೀಫ್ ವಠಾರದಲ್ಲಿ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ಕಾರ್ಯಕ್ರಮ
ನಡೆಯಲಿದೆ. ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ ಈ ಕಾರ್ಯಕ್ರಮ ನಡೆಯುತ್ತಿದ್ದು 5.30ಕ್ಕೆ ಟಿ.ಎಂ.ಶಹೀದ್ ತೆಕ್ಕಿಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಯ್ಯದ್ ಜೈನುಲ್ ಅಬಿದೀನ್ ತಂಙಳ್ ಕುಂನ್ನುಂಗೈ ದುವಾ: ನೆರವೇರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದ ನೇತೃತ್ವವನ್ನು ಉಸ್ತಾದ್ ವಲಿಯುದ್ದೀನಿ ಫೈಝಿ ವಾಝಕ್ಕಾಡ್ ವಹಿಸಲಿದ್ದಾರೆ. ಕಾರ್ಯಕ್ರಮದ ವೇದಿಕೆಯಲ್ಲಿ ಹಿರಿಯ ಪಂಡಿತರಾದ ಹುಸೈನ್ ದಾರಿಮಿ ರಂಜಿಲಾಡಿ, ರಿಯಾಜ್ ಫೈಝಿ ಎಮ್ಮೆಮಾಡು ಮೊದಲಾದ ಧಾರ್ಮಿಕ ಗುರುಗಳು ಭಾಗವಹಿಸಲಿದ್ದಾರೆ. ಗೂನಡ್ಕ ಎಸ್ಕೆಎಸ್ಎಸ್ಎಫ್ ಶಾಖಾ ಅಧ್ಯಕ್ಷ ಸಾಜಿದ್ ಅಝ್ಹರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಇದೇ ಕಾರ್ಯಕ್ರಮದ ವೇದಿಕೆಯಲ್ಲಿ ಮಜ್ಲಿಸ್ನ್ನೂರ್ ವಾರ್ಷಿಕ ಕಾರ್ಯಕ್ರಮವನ್ನು ನಡೆಯಲಿದೆ. ರಾತ್ರಿ 11 ಗಂಟೆಗೆ ಸರಿಯಾಗಿ ಅನ್ನದಾನ ಕಾರ್ಯಕ್ರಮ ನಡೆಯಲಿದೆ ಎಂದು ಎಸ್ ಕೆ ಎಸ್ ಎಸ್ ಗೂನಡ್ಕ ಶಾಖೆಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಮೊಟ್ಟೆಂಗಾರ್ ತಿಳಿಸಿದ್ದಾರೆ.