ಮಂಡೆಕೋಲು:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯುತ್ತಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಸಹಕಾರ ಸದನದಲ್ಲಿ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಮಂಡೆಕೋಲು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ
ರಾಷ್ಟ್ರೀಯ ಸೇವಾ ಯೋಜನೆಯ ಧ್ವಜಾರೋಹಣ ಮಾಡುವುದರೊಂದಿಗೆ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷ ಕುಶಲ ಉದ್ದಂತಡ್ಕ, ಸದಸ್ಯರಾದ ವಿನುತ ಪಾತಿಕಲ್ಲು, ಯಾದವ ಸಭಾ ಪ್ರಾದೇಶಿಕ ಸಮಿತಿ ಮಂಡೆಕೋಲು ಇದರ ಅಧ್ಯಕ್ಷ ಅಪ್ಪಯ್ಯ ಮಣಿಯಾಣಿ ಅಕ್ಕಪ್ಪಾಡಿ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ ಡಿ ವಿ, ವಿಧ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಯಂ, ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ. ಎ., ವಿಧ್ಯಾರ್ಥಿ ಸಂಘದ ಅಧ್ಯಕ್ಷ ಆರ್ಥಿಕ್ ಕೆ. ಎಸ್., ಕಾರ್ಯದರ್ಶಿ ಶ್ರೀಜ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಭಿರಾರ್ಥಿಗಳಾದ ಅಶ್ವಿನಿ ಮತ್ತು ರುಚಿತ ಇವರು ಪ್ರಾರ್ಥಿಸಿ, ಲಕ್ಷ್ಮೀಶ್ರೀ ಸ್ವಾಗತಿಸಿ, ಶಶಾಂಕ್ ಕೊಯಿಲ ವಂದಿಸಿದರು. ಲತಾಶ್ರೀ ಹಾಗೂ ಸುಮಿತ್ರ ಕಾರ್ಯಕ್ರಮ ನಿರೂಪಿಸಿದರು.
ಎನ್.ಎಸ್. ಎಸ್ ಶಿಬಿರವು
ಈ ಶಿಬಿರದಲ್ಲಿ ಗ್ರಾಮದ ವಿವಿಧ ಶಾಲೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಹಾಗೂ ಆರೋಗ್ಯ ಸಮೀಕ್ಷೆಯನ್ನು ನಡೆಸಲಾಗುತಿದೆ.