ನವದೆಹಲಿ: ಆಪರೇಷನ್ ಅಜಯ್ ಅಡಿಯಲ್ಲಿ ಯುದ್ಧ ಪೀಡಿತ ಇಸ್ರೇಲ್ನಿಂದ 274 ಭಾರತೀಯರನ್ನು ಹೊತ್ತ ನಾಲ್ಕನೇ ವಿಮಾನ ದೆಹಲಿ ತಲುಪಿದೆ. ಅವರನ್ನು ಕೇಂದ್ರ ಸಚಿವ ವಿ.ಕೆ ಸಿಂಗ್ ಬರಮಾಡಿಕೊಂಡರು. ಟೆಲ್ ಅವೀವ್ ವಿಮಾನ ನಿಲ್ದಾಣದಿಂದ ಶನಿವಾರ ರಾತ್ರಿ ಎರಡು
ವಿಮಾನಗಳು ಹೊರಟಿದ್ದವು. 3ನೇ ವಿಮಾನದಲ್ಲಿ ಶನಿವಾರ ಹೊರಟ 197 ಭಾರತೀಯರು ಕೂಡ ಇಂದು ಬೆಳಿಗ್ಗೆ ದೆಹಲಿ ತಲುಪಿದ್ದಾರೆ.
ಅವರನ್ನು ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರು ದೆಹಲಿ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು.ಈ ಮೂಲಕ ಇಲ್ಲಿಯವರೆಗೆ, ಒಟ್ಟು 918 ಭಾರತೀಯ ಪ್ರಜೆಗಳನ್ನು ಇಸ್ರೇಲ್ನಿಂದ ಭಾರತಕ್ಕೆ ಕರೆತರಲಾಗಿದೆ.
ಅಕ್ಟೋಬರ್ 7 ರಂದು ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ನಡೆಸಿದ ಭೀಕರ ದಾಳಿಯ ನಂತರ ಅಕ್ಟೋಬರ್ 12 ರಂದು ‘ಆಪರೇಷನ್ ಅಜಯ್’ ಅನ್ನು ಪ್ರಾರಂಭಿಸಲಾಯಿತು.