ಪಂಬೆತ್ತಾಡಿ:ಪಂಬೆತ್ತಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಸಾಮಾನ್ಯ ಸ್ಥಾನದಿಂದ ಜೆಡಿಎಸ್ ಜಿಲ್ಲಾಧ್ಯಕ್ಷ ಸಂಘದ ಹಾಲಿ ಅಧ್ಯಕ್ಷ ಜಾಕೆ ಮಾಧವ ಗೌಡ, ಮಾಜಿ
ಉಪಾಧ್ಯಕ್ಷ ಸಂತೋಷ್ ಜಾಕೆ, ಜಯರಾಮ ಬೆಳಗಜೆ, ದಿಲೀಪ್ ಬಾಬ್ಲುಬೆಟ್ಟು, ಸತ್ಯಶಂಕರ ಕಲ್ಚಾರ್, ದಿನೇಶ್ ಪಂಜದಬೈಲು ನಾಮ ಪತ್ರ ಸಲ್ಲಿಸಿದರು. ಹಿಂದುಳಿದ ವರ್ಗ ಎ ಕ್ಷೇತ್ರದಿಂದ ರೋಹಿತಾಶ್ವ, ಹಿಂದುಳಿದ ವರ್ಗ ಬಿ ಪದ್ಮನಾಭ ಪಿ, ಪರಿಶಿಷ್ಟ ಪಂಗಡ ಮೀಸಲು ಸ್ಥಾನದಿಂದ ಪುಷ್ಪಾವತಿ ಅಣ್ಣಪ್ಪ ನಾಯ್ಕ, ಪರಿಶಿಷ್ಟ ಜಾತಿ ಮೀಸಲು ಸ್ಥಾನದಿಂದ ಕರಿಯ ಮತ್ತು ಗುರುವ, ಮಹಿಳಾ ಮೀಸಲು ಸ್ಥಾನದಿಂದ ಮೂಕಾಂಬಿಕಾ ಮತ್ತು ರತಿದೇವಿ ಜಾಕೆ, ಸಾಲಗಾರರಲ್ಲದ ಕ್ಷೇತ್ರದಿಂದ ರಕ್ಷಿತ್ ಹೆಚ್ ನಾಮಪತ್ರ ಸಲ್ಲಿಸಿದ್ದಾರೆ.