The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಕಬಡ್ಡಿ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವ ಕ್ರೀಡೆ: ಡಾ. ರೇಣುಕಾ ಪ್ರಸಾದ್ ಕೆ.ವಿ

by ದಿ ಸುಳ್ಯ ಮಿರರ್ ಸುದ್ದಿಜಾಲ November 18, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 18, 2022
Share this article

ಪಂಜ::ಕಬಡ್ಡಿ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿ, ಚುರುಕತನವನ್ನು ಹೆಚ್ಚಿಸಿ, ಮನುಷ್ಯನಲ್ಲಿರುವ ಆಲಸ್ಯ ಮತ್ತು ಉದಾಸಿನತೆಯನ್ನು ಹೋಗಲಾಡಿಸುತ್ತದೆ. ವಿದ್ಯಾರ್ಥಿಗಳು ತರಗತಿಯಲ್ಲಿ ಪಾಠ ಕೇಳುವುದರ ಜೊತೆಗೆ ಕ್ರೀಡೆಯಲ್ಲಿ ಪಾಲ್ಗೊಂಡರೆ ಅದು ಅವರ ಓದಿಗೆ ಪೂರಕವಾದ ಮಾನಸಿಕತೆಯನ್ನು ಒದಗಿಸಿ ಕೊಡುತ್ತದೆ ಎಂದು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಪ್ರಧಾನ ಕಾರ್ಯದರ್ಶಿ ಹಾಗು ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ರೇಣುಕಾ ಪ್ರಸಾದ್ ಕೆ. ವಿ ಆಶಯ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವ್ಯಕ್ತಪಡಿಸಿದರು. ಅವರು ಪಂಜದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
ಮನುಷ್ಯಆರೋಗ್ಯದಿಂದಿರಬೇಕಾದರೆ ಕ್ರೀಡೆ ಅತಿ ಮುಖ್ಯ ಅದರಲ್ಲೂ ಕಬಡ್ಡಿ ಅತ್ಯಂತ ಜನಪ್ರಿಯ ಆಟ. ಕಬಡ್ಡಿ ಎನ್ನುವುದು ಈ ಭಾಗದ ಜನರ ನೆಚ್ಚಿನ ಆಟ. ಇದು ಶೌರ್ಯ, ಶಕ್ತಿ, ಜಾಣ್ಮೆ, ಬುದ್ಧಿವಂತಿಕೆಯನ್ನು ಒಳಗೊಂಡ ಒಂದು ದೈಹಿಕ ಸಾಮರ್ಥ್ಯವನ್ನು ಪ್ರದರ್ಶಿಸುವ ಒಂದು ಆಟ. ಕರಾವಳಿಯ ನೆಚ್ಚಿನ ಆಟವಾದ ಕಬಡ್ಡಿಗೆ ಈಗ ವಿಶ್ವ ಮಾನ್ಯತೆ ದೊರೆತಿರುವುದು ಹೆಮ್ಮೆಯ ಸಂಗತಿ. ಇವತ್ತು ಕಬಡ್ಡಿ ಆಟವೂ ಜಗತ್ತಿನಾದ್ಯಂತ ಹೆಣ್ಣು ಗಂಡು ಭೇದವಿಲ್ಲದೆ ಎಲ್ಲರೂ ಆಡುವಂತಾಗಿದೆ ಎಂದರು. ಕಾರ್ಯಕ್ರಮವನ್ನು ಬಂದರು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು. ವೇದಿಕೆಯಲ್ಲಿ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಅಧ್ಯಕ್ಷರಾದ ಸೀತಾರಾಮ ರೈ, ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ಎನ್.ಎ ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಅಮೆಚೂರ್ ಕಬಡ್ಡಿ ಅಸೋಸಿಯೇಷನ್‌ನ ಅ ಅಧ್ಯಕ್ಷ ಮಾಧವ ಬಿ.ಕೆ, ಸಮೂಹ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಶೀತಲ್ ಯು.ಕೆ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಸಹಕಾರಿ ಸಂಘಗಳು ಊರಿನ ಜನರ ನಾಡಿ ಮೀಡಿತವಾಗಬೇಕು: ಡಾ. ರೇಣುಕಾ ಪ್ರಸಾದ್ ಕೆ.ವಿ
next post
ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ:ರಾಜ್ಯ ಮತ್ತು ಕೇಂದ್ರ ಸರಕಾರ ಕ್ರೀಡೆಗಳಿಗೆ ಪೂರಕವಾಗಿ ಮೂಲ ಸೌಕರ್ಯ-ಎಸ್.ಅಂಗಾರ

You may also like

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ಭಾರತ ವಿರುದ್ಧ ಬೃಹತ್ ಮೊತ್ತದತ್ತ...

June 8, 2023

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯವಾರ್ಷಿಕ ಕ್ರೀಡಾಕೂಟ

June 7, 2023

ಇಂದಿನಿಂದ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್: ಭಾರತ Vs ಆಸ್ಟ್ರೇಲಿಯಾ

June 7, 2023

ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ...

June 4, 2023

ರೋಚಕ ಜಯದೊಂದಿಗೆ ಐದನೇ ಬಾರಿ ಐಪಿಎಲ್ ಪ್ರಶಸ್ತಿ ಪಡೆದ ಚೆನ್ನೈ...

May 30, 2023

ಸಾಯಿ ಸುದರ್ಶನ್ ಸ್ಪೋಟಕ ಇನ್ನಿಂಗ್ಸ್: ಚೆನ್ನೈಗೆ 215 ರನ್ ಗುರಿ...

May 29, 2023

ಮಳೆಯಿಂದ ಐಪಿಎಲ್ ಫೈನಲ್ ಮುಂದೂಡಿಕೆ: ಚೆನ್ನೈ– ಗುಜರಾತ್ ಫೈನಲ್‌ ಇಂದು

May 29, 2023

ಅಹಮದಾಬಾದ್‌ನಲ್ಲಿ ಭಾರೀ ಮಳೆ: ಚೆನ್ನೈ– ಗುಜರಾತ್ ಐಪಿಎಲ್ ಫೈನಲ್ ಪಂದ್ಯ...

May 28, 2023

ಐಪಿಎಲ್ ಫೈನಲ್‌ಗೆ ಕ್ಷಣ ಗಣನೆ: ಚೆನ್ನೈ vs ಗುಜರಾತ್ ಮಧ್ಯೆ...

May 28, 2023

ಐಪಿಎಲ್: ಶುಭಮನ್ ಗಿಲ್ ಭರ್ಜರಿ ಶತಕ, ಮೋಹಿತ್‌ಗೆ ಐದು ವಿಕೆಟ್:...

May 27, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ