The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಜೇಸಿಐ ಪಂಜ ಪಂಚಶ್ರೀ 25 ನೇ ವರ್ಷಾಚರಣೆ ‘ರಜತ ರಶ್ಮಿ’ ಸಂಭ್ರಮಕ್ಕೆ ಚಾಲನೆ

by ದಿ ಸುಳ್ಯ ಮಿರರ್ ಸುದ್ದಿಜಾಲ November 7, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 7, 2022
Share this article

ಪಂಜ: ಜೇಸಿಐ ಪಂಜ ಪಂಚಶ್ರೀಯ 25 ನೇ ವರ್ಷಾಚರಣೆ ‘ರಜತ ರಶ್ಮಿ’ ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ
ಕಾರ್ಯಕ್ರಮವನ್ನು ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ್ ದಾಮ್ಲೆ ಉದ್ಘಾಟಿಸಿದರು. ಜೇಸಿ ಸಂಸ್ಥೆ ಯುವ ಜನರ ಬೆಳವಣಿಗೆಗಾಗಿ ಬೆಳೆದು ಬಂದ ಅಂತರಾಷ್ಟ್ರೀಯ ಸಂಸ್ಥೆ. ಜೇಸಿಐ ಪಂಜ ಪಂಚಶ್ರೀ ಜೇಸಿಯ ಉದ್ದೇಶವನ್ನು ಅಕ್ಷರಷಃ ಅನುಷ್ಠಾನ‌ ಗೊಳಿಸಿದೆ ಎಂದು ಹೇಳಿದರು. ತಾರಾಲಯವನ್ನು ಉದ್ಘಾಟಿಸಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಉಪನ್ಯಾಸ ನೀಡಿದ ಅವರು ಮಕ್ಕಳಿಗೆ ಆಕಾಶ ವಿಸ್ಮಯಗಳನ್ನು ವೀಕ್ಷಣೆ ಮಾಡಲು ಪ್ರೇರಣೆ ನೀಡಬೇಕು. ಆಕಾಶದಲ್ಲಿ ನಕ್ಷತ್ರಗಳು, ಗ್ರಹಗಳ ವೀಕ್ಷಣೆ, ಮೋಡಗಳ ಓಟ, ಅಲ್ಲಿ ಮೂಡುವ ಬೇರೆ ಬೇರೆ ರೂಪ, ಚಿತ್ರಗಳನ್ನು ಕಣ್ತುಂಬಿಕೊಳ್ಳಬೇಕು.ಅಂತಹ ಶಿಕ್ಷಣ ಅಗತ್ಯವಿದೆ.ಆಕಾಶ ಎನ್ನುವುದು ನಿಜವಾದ . ಖಗೋಳಜ್ಞಾನಿಗಳು ,
ಜ್ಯೋತಿಷ್ಯಜ್ಞಾನಿಗಳು ಅವುಗಳಲ್ಲಿ ನಡೆಯುವ ಬದಲಾವಣೆಗಳನ್ನು ತಿಳಿಸುತ್ತವೆ ಎಂದು ಅವರು ಹೇಳಿದರು. ಮುಖ್ಯ ಅತಿಥಿ
ಪ್ರಾಂತ್ಯ’ಸಿ’ ವಲಯ 15ರ ಉಪಾಧ್ಯಕ್ಷ ರವಿಚಂದ್ರ ಪಾಟಾಳಿ ಮಾತನಾಡಿ
“ಜೇಸಿಐ ಪಂಜ ಪಂಚಶ್ರೀ ಉತ್ತಮ ಕ್ರಿಯಾಶೀಲ ಘಟಕವಾಗಿದೆ. ರಜತ ರಶ್ಮಿ ಕಾರ್ಯಕ್ರಮ ಯಶಸ್ವಿಯಾಗಲಿ.ಘಟಕವು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.

ಝೂ ಪೆಟ್ ಶೋ ಉದ್ಘಾಟನೆ:
ಬಲು ಅಪರೂಪದ ಸಾಕು ಪ್ರಾಣಿಗಳು, ಪಕ್ಷಿಗಳು, ಮೀನುಗಳು ಪ್ರದರ್ಶನ ‘ಝೂ ಪೆಟ್ ಶೋ’ ವನ್ನು ವಲಯ 15ರ ಉಪಾಧ್ಯಕ್ಷ ರವಿಚಂದ್ರ ಪಾಟಾಳಿ ಪಾರಿವಾಳಗಳನ್ನು ಹಾರಿಸಿ ಉದ್ಘಾಟಿಸಿದರು. ನ.7 ರಿಂದ ನ.9ರ ತನಕ ಪ್ರದರ್ಶನ ಜರುಗಲಿದೆ. ತಾರಾಲಯ ‘ಬೆಳ್ಳಿ ತಾರೆ’ ನಕ್ಷತ್ರ ಲೋಕದಲ್ಲೊಂದು ಸುತ್ತು’ ಪ್ರದರ್ಶನವನ್ನು
ಸುಳ್ಯ ಸ್ನೇಹ ಶಿಕ್ಷಣ ಸಂಸ್ಥೆ ಸಂಚಾಲಕ ಡಾ. ಚಂದ್ರಶೇಖರ್ ದಾಮ್ಲೆ ಉದ್ಘಾಟಿಸಿದರು. ಪ್ರದರ್ಶನ ನ.7ಮತ್ತು ನ.8 ರಂದು ನಡೆಯಲಿದೆ.
ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಶಿವಪ್ರಸಾದ್ ಹಾಲೆಮಜಲು ಸಭಾಧ್ಯಕ್ಷತೆ ವಹಿಸಿದ್ದರು.
ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ಮತ್ತು ಘಟಕದ ಸ್ಥಾಪಕಾಧ್ಯಕ್ಷ ದೇವಿಪ್ರಸಾದ್ ಜಾಕೆ, ಸಮಿತಿಯ ಕಾರ್ಯದರ್ಶಿ ತೀರ್ಥಾನಂದ ಕೊಡೆಂಕಿರಿ, ಕಾರ್ಯಕ್ರಮ ನಿರ್ದೇಶಕ ಲೋಕೇಶ್ ಆಕ್ರಿಕಟ್ಟೆ, ನಿಕಟಪೂರ್ವ ಅಧ್ಯಕ್ಷ ಗಣೇಶ್ ಪ್ರಸಾದ್ ಭೀಮಗುಳಿ, ಕಾರ್ಯದರ್ಶಿ ಕೌಶಿಕ್ ಕುಳ ,ಝೂ ಪೆಟ್ ಶೋ ಕಾರ್ಯಕ್ರಮ ಸಂಯೋಜಕ ನಿಶಿತ್ ಮುಂಡೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರಾಜೇಶ್ ಕಂಬಳ‌ ವೇದಿಕೆಗೆಗೆ ಆಹ್ವಾನಿಸಿದರು.
ರಕ್ಷಿತ್ ಗೋಳಿಕಟ್ಟೆ ಜೇಸಿ ವಾಣಿ ನುಡಿದರು.ದೇವಿಪ್ರಸಾದ್ ಜಾಕೆ ಸ್ವಾಗತಿಸಿ ಪ್ರಸ್ತಾವನೆಗೈದರು. ತೀರ್ಥಾನಂದ ಕೊಡೆಂಕಿರಿ , ಚಂದ್ರಶೇಖರ ಕುಕ್ಕುಪುಣಿ ಅತಿಥಿಗಳನ್ನು ಪರಿಚಯಿಸಿದರು.ಕೌಶಿಕ್ ಕುಳ ವಂದಿಸಿದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಅರೆಭಾಷೆ ಅಂಕಣ-ಹರ್ಟೆ: ಫೇಸ್ ಬುಕ್ ಬರಹನೂ..ಒಂದು ರತ್ನ ಟೈಟಲೂ…. !!!
next post
ನ.30 ರಂದು ಸುಳ್ಯ ಪ್ರೆಸ್ ಕ್ಲಬ್ ನೂತನ ಕಟ್ಟಡ ಉದ್ಘಾಟನೆ : ಆಮಂತ್ರಣ ಪತ್ರಿಕೆ ಬಿಡುಗಡೆ

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಗೃಹ ಸಚಿವ ಡಾ.ಜಿ. ಪರಮೆಶ್ವರ್ ಅವರಿಗೆ...

June 8, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ