ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವರ ಪರಿವಾರ ದೈವಗಳಾದ ಶ್ರೀ ರಕ್ತೇಶ್ವರಿ ದೈವದ ಪುನಃ ಪ್ರತಿಷ್ಠಾ ಕಾರ್ಯಕ್ರಮ ಜ.17 ಮತ್ತು 18ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಮೂಲಸ್ಥಾನದಲ್ಲಿ ಕ್ಷೇತ್ರದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ
ತಂತ್ರಿಗಳ ನೇತೃತ್ವದಲ್ಲಿ

ಜ.18ರಂದು ಶನಿವಾರ ಪೂ. 9.00 ರಿಂದ 9.45ರ ಕುಂಭ ಲಗ್ನ ಮೂಹೂರ್ತದಲ್ಲಿ ಶ್ರೀ ರಕೇಶ್ವರಿ ದೈವದ ಮೂಲ ಸಾನಿಧ್ಯದಲ್ಲಿ ಪ್ರತಿಷ್ಠಾ ಕಾರ್ಯಕ್ರಮವು ನಡೆಯಲಿದೆ. ಸಂಜೆ ಗಂಟೆ 6ಕ್ಕೆ ಬಂಡಾರ ತೆಗೆದು ಶ್ರೀ ರಕೇಶ್ವರಿ ದೈವದ ನೇಮೋತ್ಸವ ನಡೆಯಲಿದೆ ಎಂದು ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮಗಳು:
ಜ.17ರಂದು ಸಂಜೆ 6:30 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಸಾದ ಶುದ್ಧಿ ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ ನಡೆಯಲಿದೆ.
ರಾತ್ರಿ 8:30 ರಿಂದ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ. ಜ.18 ರಂದು ಬೆಳಿಗ್ಗೆ 7:30 ರಿಂದ ಮಹಾ ಗಣಪತಿ ಹೋಮ, ಕಲಶ ಪೂಜೆ. 9 ರಿಂದ 9.45ರ ತನಕದ ಕುಂಭ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ರಕ್ತೇಶ್ವರಿ ದೈವದ ಪುನಃ ಪ್ರತಿಷ್ಠೆ, ಕಲಶಾಭಿಷೇಕ ನಡೆಯಲಿದೆ ಎಂದು ಡಾ.ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.