ಪಂಜ:ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ತಾಂಬೂಲ ಪ್ರಶ್ನಾ ಚಿಂತನೆ ಯಲ್ಲಿ ಕಂಡು ಬಂದ ಪರಿಹಾರದ ಹಿನ್ನಲೆಯಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಆರಂಭಗೊಂಡಿದೆ.
ಡಿ.21 ಶನಿವಾರ ಬೆಳಿಗ್ಗೆ 8ರಿಂದ ಆರಂಭಗೊಂಡು ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಶ್ರೀದೇವರಿಗೆ
ಶತರುದ್ರಾಭಿಷೇಕ, ಮಹಾಗಣಪತಿ ಹೋಮ, ಮಹಾ ಮೃತ್ಯುಂಜಯ ಹೋಮ ನಡೆಯಿತು. ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿ ಹಾಗೂ ಸಲಹಾ ಸಮಿತಿ ಸದಸ್ಯರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
![](https://thesulliamirror.com/wp-content/uploads/2024/12/IMG_20241221_104846.jpg)
ಮಧ್ಯಾಹ್ನ 11.30ಕ್ಕೆ ಮುಷ್ಠಿಕಾಣಿಕೆ ಸಮರ್ಪಣೆ, ಮಹಾಪೂಜೆ, ಪ್ರಸಾದ ವಿತರಣೆ. ಸಂಜೆ 5.30ರಿಂದ ದುರ್ಗಾಪೂಜೆ, ಅಘೋರ ಹೊಮ, ಸುದರ್ಶನ ಹೋಮ,ಭಾದಾಕರ್ಷಣೆ, ಉಚ್ಛಾಟನೆ, ಡಿ.22 ಭಾನುವಾರ ಬೆಳಿಗ್ಗೆ ಬಿಂಬ ಕಲಶ ಪೂಜೆ, ಬಿಂಬ ಶುದ್ಧಿ, ಕಲಶಾಭಿಷೇಕ, ನವಕ, ಕಲಶಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.