The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಮತ್ಸ್ಯಗಳಿಗೆ ಇಲ್ಲಿ ಭಕ್ತಿಭಾವದ ಸಮರ್ಪಣೆ: ನಾಲ್ಕೂವರೆ ತಿಂಗಳ ನಿರಂತರ ಆಚರಣೆ:ಪಯಸ್ವಿನಿಯ ಮೀನುಗಳಿಗೆ ಅಕ್ಕಿ ಅರ್ಪಿಸುವ ಕಾರ್ಯ ಆರಂಭ

by ದಿ ಸುಳ್ಯ ಮಿರರ್ ಸುದ್ದಿಜಾಲ August 27, 2022
by ದಿ ಸುಳ್ಯ ಮಿರರ್ ಸುದ್ದಿಜಾಲ August 27, 2022
Share this article

*ಗಂಗಾಧರ ಕಲ್ಲಪಳ್ಳಿ.
ಸುಳ್ಯ:ಪ್ರಕೃತಿಯ ಸಕಲ ಜೀವಜಾಲಗಳಲ್ಲಿಯೂ ದೇವರನ್ನು ಕಾಣುವ ಅಪರೂಪದ ಸಂಸ್ಕೃತಿ ನಮ್ಮದು.ಅದಕ್ಕೆ ಪೂರಕ ಎಂಬಂತೆ ಸುಳ್ಯದ ಶ್ರೀ ಚೆನ್ನಕೇಶವ ದೇವಾಲಯದ ಆಚರಣೆಗೆ ಸಂಬಂಧಪಟ್ಟು ನದಿಯ ಮೀನುಗಳಿಗೆ ದಿನ ನಿತ್ಯ ಅಕ್ಕಿ ಸಮರ್ಪಿಸುವ ಅಪರೂಪದ ಆಚರಣೆ ಬುಧವಾರ ಆರಂಭಗೊಂಡಿತು. ಆಧುನಿಕ ಯುಗದಲ್ಲೂ ಮತ್ಸ್ಯವನ್ನು ಪೂಜ್ಯತಾ ಭಾವದಿಂದ ಆರಾಧಿಸಿ ಅಕ್ಕಿ ಅರ್ಪಿಸಿ ಭಕ್ತಿಪೂರ್ವಕ ಸಮರ್ಪಣೆಯ ಸಂಪ್ರದಾಯ ಇಲ್ಲಿ ಇಂದಿಗೂ ಚಾಲ್ತಿಯಲ್ಲಿದೆ. ಪಯಸ್ವಿನಿ ನದಿಯಲ್ಲಿ ವಿಹರಿಸುವ ಮೀನುಗಳಿಗೆ ಅಕ್ಕಿ ಅರ್ಪಿಸುವ ಸಂಪ್ರದಾಯ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಶ್ರಾವಣ ಮಾಸದ ಅಮವಾಸ್ಯೆಯಂದು ಆರಂಭಗೊಳ್ಳುತ್ತದೆ. ಮುಂದಿನ ಜನವರಿಯಲ್ಲಿ ಚೆನ್ನಕೇಶವ ದೇವಸ್ಥಾನದಲ್ಲಿ ಜಾತ್ರೋತ್ಸವಕ್ಕೆ ಕೊಡಿ ಇಳಿಯುವ ದಿನದ ವರೆಗೆ ಸುಮಾರು ನಾಲ್ಕೂವರೆ ತಿಂಗಳು ನಿರಂತರವಾಗಿ ಈ ಆಚರಣೆ ಮುಂದುವರಿಯಲಿದೆ. ಶ್ರಾವಣ ಅಮವಾಸ್ಯೆಯ ದಿನ ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು, ಬಲ್ಲಾಲ ಪ್ರತಿನಿಧಿಗಳು, ಅರ್ಚಕರು ಮತ್ತು ದೇವಸ್ಥಾನಕ್ಕೆ ಸಂಬಂಧಪಟ್ಟವರು ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿ ಬೂಡು ನಾಲ್ಕುಸ್ಥಾನ ದೈವಗಳ ಚಾವಡಿಗೆ ಆಗಮಿಸುವರು.ಬಳಿಕ ಚಾವಡಿಯಲ್ಲಿ ದೀಪವಿಟ್ಟು, ಪ್ರಾರ್ಥನೆ ಸಲ್ಲಿಸಿ ನದೀ ತಟಕ್ಕೆ ಬರುತ್ತಾರೆ. ನದೀ ತಟದ ಕಲ್ಲಿನ ಮೇಲೆ ದೀಪ, ಸ್ವಸ್ತಿಕವಿಟ್ಟು ಅದಕ್ಕೆ ಪೂಜೆ ಸಲ್ಲಿಸಿ ಗಂಗಾ-ವರುಣ ಪೂಜೆ ನಡೆಸಿ ನೈವೇದ್ಯ ತಯಾರಿಸುತ್ತಾರೆ. ಬಳಿಕ ಎಲ್ಲರೂ ತೀರ್ಥಸ್ನಾನ ಮಾಡಿ ಒಟ್ಟಾಗಿ ಪ್ರಾರ್ಥನೆ ನಡೆಸಿ ಅಕ್ಕಿ, ಭತ್ತ, ತೆಂಗಿನ ಕಾಯಿಯ ಹೋಳು, ಬಾಳೆ ಹಣ್ಣು ಸೇರಿಸಿ ತಯಾರಿಸಿದ ನೈವೇದ್ಯ ಮತ್ತು ಹೂವು ಗಂಧದೊಂದಿಗೆ ಪ್ರಾರ್ಥನಾ ಪೂರ್ವಕ ಮತ್ಸ್ಯಗಳಿಗೆ ಅರ್ಪಿಸುವರು. ಚೆನ್ನಕೇಶವ ದೇವಸ್ಥಾನಕ್ಕೆ ಮತ್ತು ಬೂಡು ಭಗವತಿ ಕ್ಷೇತ್ರಕ್ಕೆ ಸಂಬಧ ಪಟ್ಟವರೆಲ್ಲರೂ ಉಪಸ್ಥಿತರಿರುತ್ತಾರೆ. ಸೀಮೆ ದೇವಸ್ಥಾನ ತೊಡಿಕಾನ ಶ್ರೀ ಮಲ್ಲಿಕಾಜುನ ದೇವಸ್ಥಾನದ

ಮತ್ಸ್ಯತೀರ್ಥದ ದೇವರ ಮೀನುಗಳು ಈ ನೈವೇದ್ಯವನ್ನು ಸ್ವೀಕರಿಸಲು ಇಲ್ಲಿಗೆ ಆಗಮಿಸುತ್ತವೆ ಎಂಬ ನಂಬಿಕೆಯಿದೆ. ಮುಂದೆ ಪ್ರತಿ ದಿನ ಪನ್ನೆಬೀಡು ಚಾವಡಿಗೆ ಸಂಬಂಧಿಸಿದ ಬಲ್ಲಾಳರ ಪ್ರತಿನಿಧಿ ಅಕ್ಕಿಯನ್ನು ನದಿಯ ಮೀನುಗಳಿಗೆ ಸಮರ್ಪಣೆ ಮಾಡುವ ಕಾರ್ಯವಮನ್ನು ಮುಂದುವರಿಸುತ್ತಾರೆ. ಮಧ್ಯಾಹ್ನ 12 ಗಂಟೆಗೆ ಮುನ್ನ ಚಾವಡಿಯಲ್ಲಿ ಪ್ರಾರ್ಥನೆ ಮಾಡಿ ನದಿಗೆ ಹೋಗಿ ಮೀನುಗಳಿಗೆ ಅಕ್ಕಿ ಹಾಕಿ ನದಿಯಲ್ಲಿ ಸ್ನಾನ ಮಾಡಿ ಬಂದು ಚಾವಡಿಯಲ್ಲಿ ದೀಪವಿಟ್ಟು ಪ್ರಾರ್ಥನೆ ಸಲ್ಲಿಸುತ್ತಾರೆ. ಇದು ಹಲವು ತಲಮಾರುಗಳಿಂದ ನಡೆಯುತ್ತಾ ಬಂದಿರುವ ಸಂಪ್ರದಾಯ.
ಪಯಸ್ವಿನಿ ತಟದಲ್ಲಿ ಇಂದು ಚೆನ್ನಕೇಶವ ದೇವಸ್ಥಾನದ ಅರ್ಚಕ ಹರಿಕೃಷ್ಣ ಭಟ್ ಕಾಯರ್ತೋಡಿ ಪುಜಾ ಕಾರ್ಯಗಳನ್ನು ನೆರವೇರಿಸಿದರು.

ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ ತುದಿಯಡ್ಕ, ಬಳ್ಳಾಳ ಪ್ರತಿನಿಧಿ ಬೂಡು ರಾಧಾಕೃಷ್ಣ ರೈ,ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಸದಸ್ಯರಾದ ಬುದ್ಧ ನಾಯ್ಕ, ಸುಧಾಕರ ಕೇರ್ಪಳ, ಮಾಜಿ ಸದಸ್ಯ ಗೋಪಾಲ ನಡುಬೈಲು, ಪ್ರಮುಖರಾದ ನಾರಾಯಣ ರೈ, ಪ್ರಭಾಕರ ಮಡಿವಾಳ,ಮಹೇಶ್ ಕುಮಾರ್ ಮೇನಾಲ, ವಾಸುದೇವ ನಾಯಕ್, ಜಿನ್ನಪ್ಪ ಪೂಜಾರಿ, ಭಾಸ್ಕರ ರೈ, ಕುಸುಮಾಧರ ರೈ ಬೂಡು, ಪ್ರದೀಪ್ ರೈ ಬೂಡು, ಶುಭಾಶ್ ರೈ ಕುಕ್ಕಂದೂರು, ಯಶೂಧರ, ಸುಧಾಕರ ಬೂಡು, ಸತ್ಯಪ್ರಸಾದ್,ಮಾಯಿಲ ಬೂಡು, ದಿನಕರ ಕೇರ್ಪಳ, ಭಾಸ್ಕರ ರೈ ಮಿತ್ತೂರು, ರವಿಚಂದ್ರ ಕೇರ್ಪಳ,ವಿದಿತ್ ಬೂಡು, ರಾಜು ಪಂಡಿತ್, ಶಿವಪ್ರಸಾದ್ ರೈ ಬೂಡು, ಮಹಾಬಲ ರೈ ಬೂಡು ಮತ್ತಿತರರು ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಸುಳ್ಯದ ಕಸ ವಿಲೇವಾರಿಗೆ ಅಳವಡಿಸಿದ ಬರ್ನಿಂಗ್ ಮೆಷಿನ್ ಕೊನೆಗೂ ಚಾಲೂ: ಪ್ರತಿ ದಿನ 500 ಕೆಜಿ ಕಸ ಬರ್ನಿಂಗ್..!
next post
ಕಾಡಾನೆಗಳ ‘ಕಾರಿಡಾರ್’ ಆದ ಅಂತಾರಾಜ್ಯ ಹೆದ್ದಾರಿ..!

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

June 8, 2023

ಎಸ್ಎಸ್ಎಫ್ ಇಲ್ಲುಮಿನೇಟ್ ಕ್ಯಾಂಪ್

June 7, 2023

ಎಸ್‌ಬಿಎಸ್ ಏಣಾವರ: ನೂತನ ಪದಾಧಿಕಾರಿಗಳು

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ