ಸಂಪಾಜೆ: ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕ ಮೊಹಿದ್ಧೀನ್ ಜುಮಾ ಮಸೀದಿ ಅಧೀನದಲ್ಲಿರುವ ತೆಕ್ಕಿಲ್ ಮೊಹಮದ್ ಹಾಜಿ ಸ್ಮಾರಕ ತಕ್ವಿಯತುಲ್ ಇಸ್ಲಾಂ ಮದರಸ ಕಟ್ಟಡ ಅಭಿವೃದ್ಧಿ ಕಾಮಗಾರಿಗೆ ಕರ್ನಾಟಕ ಸರಕಾರದ ವಕ್ಫ್ ಇಲಾಖೆಯಿಂದ
10 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿದ್ದಾರೆ. ಅನುದಾನ ಬಿಡುಗಡೆಗೆ ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಪೇರಡ್ಕ ಗೂನಡ್ಕ ಮೋಹಿದ್ದೀನ್ ಜುಮ ಮಸ್ಜಿದ್ ಅಧ್ಯಕ್ಷರಾದ ಟಿ.ಎಂ ಶಾಹೀದ್ ತೆಕ್ಕಿಲ್ ವಸತಿ ಅಲ್ಪಸಂಖ್ಯಾತರ ಇಲಾಖೆ ಹಾಗು ವಕ್ಪ್ ಸಚಿವ ಝಮೀರ್ ಅಹಮ್ಮದ್ ಖಾನ್ ಅವರಿಗೆ ಮನವಿ ಮಾಡಿದ್ದರು.















