ಪೆರುವಾಜೆ:ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ
ಜ.16 ರಿಂದ ಜಾತ್ರೆ ಜ.21ರ ತನಕ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಜಾತ್ರೋತ್ಸವದ
ಪ್ರಯುಕ್ತ ಜ.16 ರಂದು ಉಗ್ರಾಣ ಮುಹೂರ್ತ ನೆರವೇರಿತು.ಕ್ಷೇತ್ರದ
ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಉಗ್ರಾಣ ಮುಹೂರ್ತ ನೆರವೇರಿಸಿದರು. ಆಡಳಿತಾಧಿಕಾರಿ ಪ್ರವೀಣ್ ಕುಮಾರ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಇಂದು ಸಂಜೆ ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿಯಿಂದ ಹಸುರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ರಾತ್ರಿ 7 ಕ್ಕೆ ದೇವತಾ ಪ್ರಾರ್ಥನೆ, ಧ್ವಜಾರೋಹಣ ನಡೆಯಲಿದೆ. ನಂತರ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಮಹಾಪೂಜೆ,ಶ್ರೀ ಭೂತ ಬಲಿ ನಡೆಯಲಿದೆ.

ಜ.17 ರಂದು ಬೆಳಗ್ಗೆ ಗಂಟೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮದ್ಯಾಹ್ನ 12 ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಪೇಟೆ ಸವಾರಿ,ಮಹಾಪೂಜೆ,ಶ್ರೀ ಭೂತ ಬಲಿ ನಡೆಯಲಿದೆ.
ಜ.18 ರಂದು ಬೆಳಗ್ಗೆ 8.30 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಶ್ರೀ ಉಳ್ಳಾಕುಲು ದೈವದ ಭಂಡಾರ ಬರುವುದು,ದರ್ಶನ ಬಲಿ,ಬಟ್ಟಲು ಕಾಣಿಕೆ,ಪ್ರಸಾದ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.00 ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ,ಪಲ್ಲಕ್ಕಿ ಉತ್ಸವ,ವಸಂತ ಕಟ್ಟೆ ಪೂಜೆ,ನೃತ್ಯ ಬಲಿ,ಮಹಾಪೂಜೆ,ಶ್ರೀ ಭೂತಬಲಿ ನಡೆಯಲಿದೆ. ರಾತ್ರಿ 6 ಕ್ಕೆ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ ತುಳಸಿ ಬಯಲಾಟ ಪ್ರದರ್ಶನಗೊಳ್ಳಲಿದೆ.

ಜ.19 ರಂದು ಬೆಳಗ್ಗೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ,ಮಧ್ಯಾಹ್ನ 12ಕ್ಕೆ ಶ್ರೀ ದೇವರಿಗೆ ಕಲಶಾಭಿಷೇಕ, ಪಲ್ಲಕ್ಕಿ ಉತ್ಸವ, ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 7ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ,ವ್ಯಾಘ್ರಚಾಮುಂಡಿ ದೈವ(ಪಿಲಿಭೂತ) ದ ಭಂಡಾರ ಬರುವುದು. ಅನಂತರ ಬ್ರಹ್ಮರಥೋತ್ಸವ,ಪೆರುವಾಜೆ ಬೆಡಿ ಪ್ರದರ್ಶನ ನಡೆಯಲಿದೆ. ಆ ಬಳಿಕ ಮಹಾಪೂಜೆ, ಶಯನೋತ್ಸವ, ಕವಾಟ ಬಂಧನ ನಡೆಯಲಿದೆ.
ಜ.20 ರಂದು ಬೆಳಗ್ಗೆ 7 ಕ್ಕೆ ಕವಾಟೋದ್ಘಾಟನೆ,ಶ್ರ್ರೀ ದೇವರಿಗೆ ತೈಲಾಭಿಷೇಕ,ಪಂಚಾಮೃತಾಭಿಷೇಕ,ಸೀಯಾಳಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ತುಲಾಭಾರ ಸೇವೆ,ಯಾತ್ರಾ ಹೋಮ, ಪ್ರಸಾದ ವಿತರಣೆ ನಡೆಯಲಿದೆ.ರಾತ್ರಿ 7 ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ,ಅವಭೃತ ಸ್ನಾನ ಧ್ವಜಾವರೋಹಣ,ಮಹಾಪೂಜೆ,ಪ್ರಸಾದ ವಿತರಣೆ ನಂತರ ಉಳ್ಳಾಕುಲು,ಮೈಷಂತಾಯ,ಶ್ರೀ ವ್ಯಾಘ್ರಚಾಮುಂಡಿ ದೈವದ ಭಂಡಾರ ತೆಗೆಯುವುದು.
ಜ.21 ರಂದು ಬೆಳಿಗ್ಗೆ ಮಹಾಗಣಪತಿ ಹೋಮ,ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ,ಪ್ರಸಾದ ವಿತರಣೆ ನಡೆಯಲಿರುವುದು. ಮದ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ , ಕಲಶಾಭಿಷೇಕ, ಮಹಾಪೂಜೆ,ವೈದಿಕ ಮಂತ್ರಾಕ್ಷತೆ,ಪ್ರಸಾದ ವಿತರಣೆ ನಡೆಯಲಿರುವುದು. ಮಧ್ಯಾಹ್ನ ಶ್ರೀ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ,ಪ್ರಸಾದ ವಿತರಣೆ,ಅನ್ನಸಂತರ್ಪಣೆ, ಸಂಜೆ 7 ಕ್ಕೆ ಶ್ರೀ ಕಲ್ಲುರ್ಟಿ,ಕಲ್ಕುಡ ದೈವದ ನೇಮೋತ್ಸವ ನಡೆಯಲಿದೆ.ಪ್ರತೀ ದಿನ ಬೆಳಿಗ್ಗೆ ಮತ್ತು ಸಂಜೆ ವಿವಿಧ ಭಜನ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತಾಧಿಕಾರಿ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.











