ಸುಳ್ಯ: ದಿ.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಅಂಕತ್ತಡ್ಕ ಎಂಬಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತದ ಲೋಕಾರ್ಪಣೆಯನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯ ಹಾಗು ದ.ಕ.ಲೋಕಸಭಾ

ಸದಸ್ಯರಾದ ನಳಿನ್ ಕುಮಾರ್ ಕಟೀಲು ಹಾಗು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಸೇರಿ ನೆರವೇರಿಸಿದರು.ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ರೈ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ,ಪುತ್ತೂರು ಎ.ಪಿ.ಎಂ.ಸಿ.ಮಾಜಿ ಅಧ್ಯಕ್ಷ ದಿನೇಶ್ ಮೆದು, ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ, ಪ್ರಮುಖರಾದ ಇಂದಿರಾ ಬಿ.ಕೆ.,ಜಗದೀಶ್ ಅಧಿಕಾರಿ ಸೇರಿದಂತೆ ಪ್ರಮುಖರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.