ಸುಳ್ಯ: ಕೆವಿಜಿ ಅಮರಜ್ಯೋತಿಯಲ್ಲಿ ಪ.ಪೂ.ಕಾಲೇಜಿನಲ್ಲಿ ಮುಂದಿನ ಅಧ್ಯಯನ ವರ್ಷದ ದ್ವಿತೀಯ ಪಿ ಯು ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ನಡೆಯಿತು. ಕಾಲೇಜಿನ ಸಿ ಇ ಒ ಡಾ.ಉಜ್ವಲ್ ಯು ಜೆ ಮಾತನಾಡಿ ದ್ವಿತೀಯ ಪಿ ಯು ಪ್ರಸ್ತುತ ಶೈಕ್ಷಣಿಕ ಸಾಧನೆಯ ದೃಷ್ಟಿಯಿಂದ ವಿದ್ಯಾರ್ಥಿಗಳಿಗೆ ಮಹತ್ವದ ವರ್ಷ ಆದುದರಿಂದ ತಮ್ಮ ಶ್ರಮವನ್ನು
ಹಾಕುವುದರ ಮೂಲಕ ಉತ್ತಮ ಮಟ್ಟದ ಶೈಕ್ಷಣಿಕ ಸಾಧನೆ ಮಾಡುವಂತೆ ಹಾಗೂ ವಿದ್ಯಾರ್ಥಿಗಳಿಗೆ ಪ್ರೊಫೆಷನಲ್ ಕೋರ್ಸ್ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಮಾತನಾಡಿ ವಿದ್ಯಾರ್ಥಿಗಳು ಇಂದಿನಿಂದಲೇ ಶ್ರದ್ದೆಯಿಂದ ಸಂಪೂರ್ಣವಾಗಿ ಅಧ್ಯಯನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಉತ್ತಮ ಫಲಿತಾಂಶ ಬರುವಂತಾಗಲಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಸ್ವಾಗತಿಸಿ, ಉಪನ್ಯಾಸಕಿ ಅರ್ಪಿತಾ ಕೆ ಎನ್ ವಂದಿಸಿದರು.