ಕಾಣಿಯೂರು:ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ.3 ಮತ್ತು 4ರಂದು ಶ್ರೀ ವಿಷ್ಣುಮೂರ್ತಿ ದೈವದ 56ನೇ ವರ್ಷದ ಒತ್ತೆಕೋಲ ನಡೆಯಲಿದೆ. ಒತ್ತೆಕೋಲಕ್ಕೆ ಕೊಳ್ಳಿ ಕೊಯ್ಯುವ ಮೂಹೂರ್ತ ಮಾ.1 ರಂದು ನಡೆಯಿತು. ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ ದೇವಿಪ್ರಸಾದ್ ಕಾನತ್ತೂರ್, ಮೊಕ್ತೇಸರರಾದ
ವೆಂಕಟರಮಣ ಆಚಾರ್ಯ ಜನಾರ್ಧನ ಆಚಾರ್ಯ, ಕೃಷ್ಣ ಆಚಾರ್ಯ, ಆಡಳಿತ ಮಂಡಳಿ ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ ಪ್ರಧಾನ ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಆಡಳಿತ ಮಂಡಳಿ ಸದಸ್ಯರಾದ ಸಂಜೀವ ರೈ ಪೈಕ,ಕಾಣಿಯೂರು ಮಠದ ಮ್ಯಾನೇಜರ್ ಶ್ರೀನಿಧಿ ಆಚಾರ್ಯ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಏ.3, 4ರಂದು ಒತ್ತೆಕೋಲ:
ಎ.3ರಂದು ಬೆಳಿಗ್ಗೆ ಎಂಟಕ್ಕೆ ಸ್ಥಳ ಶುದ್ದೀಕರಣ ಗಣಹೋಮ ನಡೆಯಲಿದೆ. 5.30ಕ್ಕೆ ವಿಷ್ಣುಪುರ ದೈವಸ್ಥಾನದಿಂದ ಭಂಡಾರ ತೆಗೆಯುವುದು. ಸಂಜೆ 6.30ಕ್ಕೆ ಮೇಲೇರಿಗೆ ಅಗ್ನಿ ಸ್ಪರ್ಶ ನಡೆಯಲಿದೆ. ಸಂಜೆ 7ರಿಂದ ಭಜನಾ ಕಾರ್ಯಕ್ರಮ.ರಾತ್ರಿ 10ರಿಂದ ವಿಷ್ಣುಮೂರ್ತಿ ದೈವದ ಕುಳ್ಚಾಟ ನಡೆಯಲಿದೆ. ರಾತ್ರಿ 11ರಿಂದ

ಸಾಯಿಕಲಾ ಯಕ್ಷ ಬಳಗ ಡಾ. ಶಿವರಾಮ ಕಾರಂತ ಬಾಲವನ ಪುತ್ತೂರು ಯಕ್ಷಗಾನ ತಂಡ ಇವರಿಂದ ಯಕ್ಷಗಾನ ಬಯಲಾಟ ‘ಕೊಲ್ಲೂರು ಕ್ಷೇತ್ರ ಮಹಾತ್ಮೆ ನಡೆಯಲಿದೆ’ ಎ.4ರಂದು ಪ್ರಾತಃಕಾಲ 5ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ, ಬೆಳಿಗ್ಗೆ 7.30ಕ್ಕೆ ಮಾರಿಕಳ, ಬೆಳಿಗ್ಗೆ 8ಕ್ಕೆ ಗುಳಿಗ ದೈವದ ಕೋಲ, ಬಳಿಕ ಪ್ರಸಾದ ವಿತರಣೆ, ಹರಕೆ ಒಪ್ಪಿಸುವುದು ನಡೆಯಲಿದೆ.ಏ.2ರಂದು ಹಸಿರುವಾಣಿ ಸಮರ್ಪಣೆ ನಡೆಯಲಿದೆ ಎಂದು ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದ
ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ.