ಕಾಣಿಯೂರು:ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವದ 56ನೇ ವರ್ಷದ ಒತ್ತೆಕೋಲ ಸಂಪನ್ನಗೊಂಡಿತು. ಎ.2ರಂದು ಹಸಿರುವಾಣಿ ಸಮರ್ಪಣೆಯೊಂದಿಗೆ ಆರಂಭಗೊಂಡ ಒತ್ತೆಕೋಲದ ಭಾಗವಾಗಿ ಎ.3ರಂದು ಬೆಳಿಗ್ಗೆ ಸ್ಥಳ ಶುದ್ದೀಕರಣ ಗಣಹೋಮ ನಡೆಯಿತು. ಸಂಜೆ ವಿಷ್ಣುಪುರ ದೈವಸ್ಥಾನದಿಂದ
ಭಂಡಾರ ತೆಗೆದು ಬಳಿಕ ಮೇಲೇರಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ರಾತ್ರಿ ಭಜನಾ ಕಾರ್ಯಕ್ರಮ ನಡೆಯಿತು. ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ ಚಾಲನೆ ನೀಡಿದರು. ರಾತ್ರಿ ವಿಷ್ಣುಮೂರ್ತಿ ದೈವದ ಕುಳ್ಚಾಟ ನಡೆಯಿತು. ಬಳಿಕ ಸಾಯಿಕಲಾ ಯಕ್ಷ ಬಳಗ ಡಾ. ಶಿವರಾಮ ಕಾರಂತ ಬಾಲವನ ಪುತ್ತೂರು ಯಕ್ಷಗಾನ ತಂಡ ಇವರಿಂದ ಯಕ್ಷಗಾನ ಬಯಲಾಟ ‘ಕೊಲ್ಲೂರು ಕ್ಷೇತ್ರ ಮಹಾತ್ಮೆ ನಡೆಯಿತು.

ಎ.4ರಂದು ಪ್ರಾತಃಕಾಲ 5ಕ್ಕೆ ಶ್ರೀ ವಿಷ್ಣುಮೂರ್ತಿ ದೈವದ ಅಗ್ನಿ ಪ್ರವೇಶ, ಬೆಳಿಗ್ಗೆ ಮಾರಿಕಳ, ಬೆಳಿಗ್ಗೆ ಗುಳಿಗ ದೈವದ ಕೋಲ, ಬಳಿಕ ಪ್ರಸಾದ ವಿತರಣೆ, ಹರಕೆ ಒಪ್ಪಿಸುವುದು ನಡೆಯಿತು. ಪುಣ್ಚತ್ತಾರು ಕರಿಮಜಲು ವಿಷ್ಣುಪುರ ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ , ಮೊಕ್ತೇಸರರಾದ

ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ, ಕೃಷ್ಣ ಆಚಾರ್ಯ ವಿಷ್ಣುಪುರ, ಉಪಾಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ, ಕಾರ್ಯದರ್ಶಿ ಮೋನಪ್ಪ ಬಂಡಾಜೆ, ಜೊತೆ ಕಾರ್ಯದರ್ಶಿ ಮಿಥುನ್ ಪೈಕ, ಆಡಳಿತ ಮಂಡಳಿ ಸದಸ್ಯರಾದ ಸಂಜೀವ ರೈ ಪೈಕ, ಕುಮಾರ್ ಆಚಾರ್ಯ ದೋಳ್ಪಾಡಿ ಪ್ರದೀಪ್ ಬೊಬ್ಬೆಕೇರಿ, ಭವಿಷ್ ವಿಷ್ಣುಪುರ, ಪ್ರಮೋದ್ ವಿಷ್ಣುಪುರ, ಮೋಹನ್ ವಿಷ್ಣುಪುರ ರಾಕೇಶ್ ವಿಷ್ಣುಪುರ, ರಾಜೇಶ್ ವಿಷ್ಣುಪುರ ಹಾಗೂ ಭಕ್ತರು ಇದ್ದರು.
