ಸುಳ್ಯ:ಎರಡು ದಿನಗಳ ಕಾಲ ನಡೆದ ಸುಳ್ಯ ಶ್ರೀ ಗುರು ರಾಘವೇಂದ್ರ ಮಠದ 7ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಸಂಪನ್ನಗೊಂಡಿತು. ಶ್ರೀ ಗುರುರಾಯರ ಮಠದ ಪ್ರಧಾನ ಆರ್ಚಕರಾದ ವೇದಮೂರ್ತಿ ಶ್ರೀಹರಿ ಎಳಚಿತ್ತಾಯರ ಮಾರ್ಗದರ್ಶನದಲ್ಲಿ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ನಡೆಯಿತು. ಎ.22ರಂದು
ಬೆಳಿಗ್ಗಿನಿಂದ
ಪಂಚ ವಿಂಶತಿ ಕಲಶ ಪೂಜೆ, ಕಲಶಾಭಿಷೇಕ ಶ್ರೀ ರಾಘವೇಂದ್ರ ಅಷ್ಟಾಕ್ಷರಿ ಮಂತ್ರ ಹೋಮ, ಶ್ರೀ ರಾಮ ತಾರಕ ಮಂತ್ರ ಹೋಮ ನಡೆದು ಮಧ್ಯಾಹ್ನ 12 ರಿಂದ ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಸಂಜೆ ಆಶ್ಲೇಷಾ ಬಲಿ ಪೂಜೆ ರಾತ್ರಿ ರಂಗಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆದು ಉತ್ಸವ ಸಂಪನ್ನಗೊಂಡಿತು.
ಏ.21 ರಂದು ಪಲ್ಲಕ್ಕಿಯಲ್ಲಿ ರಾಯರ ಪಟ್ಟಣ ಸವಾರಿ ನಡೆಯಿತು.ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ, ಟ್ರಸ್ಟ್ನ ಕಾರ್ಯದರ್ಶಿ ರಾಮ್ಕುಮಾರ್ ಹೆಬ್ಬಾರ್, ಖಜಾಂಜಿ ಮುರಳೀಕೃಷ್ಣ ಡಿ.ಆರ್, ಟ್ರಸ್ಟಿಗಳು, ಪದಾಧಿಕಾರಿಗಳು ಹಾಗೂ ನೂರಾರು ಮಂದಿ ಭಕ್ತರು ಉಪಸ್ಥಿತರಿದ್ದರು.