ಬೆಂಗಳೂರು:ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರಿಗೆ ಮಳೆರಾಯ ತಂಪೆರೆದಿದ್ದಾನೆ. ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಬ್ಬನ್ ಪಾರ್ಕ್, ವಿಧಾನಸೌಧ, ಶಾಂತಿನಗರ ಸೇರಿದಂತೆ ಬೆಂಗಳೂರಿನ ಹಲವೆಡೆ ಗುರುವಾರ ಗುಡುಗು ಸಹಿತ
ಮಳೆಯಾಗಿದೆ. ಇನ್ನು ಪೀಣ್ಯಾ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಹಲವು ಕಡೆ ಮೊದಲ ಮಳೆಯ ಸಿಂಚನವಾಗಿದೆ. ವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ ದಾಖಲಾಗಿತ್ತು. ಇದೀಗ ಬಿಸಿಲಿನ ಬೆಗೆಯಿಂದ ಬೇಸತ್ತ ಜನರಿಗೆ ವರುಣಾಗಮನ ಸಂತಸ ನೀಡಿದೆ.
ಕೊಡಗು, ಮೈಸೂರು ಸೇರಿದಂತೆ ಕೆಲವೆಡೆ ಇಂದು ಮಳೆಯಾಗಲಿದ್ದು, ಉಳಿದೆಡೆ ಒಣಹವೆ ಮುಂದುವರೆಯಲಿದೆ. ತುಮಕೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಉಷ್ಣ ಅಲೆ ಇರಲಿದೆ.
ಮೇ 7ರಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ,ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.