ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳಲಿದ್ದು, 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 23ರಿಂದಲೇ ಹಲವೆಡೆ ಮಳೆಯಾಗುತ್ತಿದ್ದು, ಜೂನ್ 30ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು
ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳಿಗೆ ಮಳೆಯಾಗಲಿದೆ.
ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ 26ರವರೆಗೆ ಉತ್ತಮ ಮಳೆಯಾಗುವ ಸೂಚನೆ ಇದೆ.
ಮೂಡುಬಿದಿರೆ, ಉಪ್ಪಿನಂಗಡಿ, ಮಾಣಿ, ಬಂಟವಾಳ, ನಾಪೋಕ್ಲು, ಆಗುಂಬೆ, ವಿರಾಜಪೇಟೆ, ಸೋಮವಾರಪೇಟೆ, ಕದ್ರಾ, ಗೇರುಸೊಪ್ಪ, ಮಂಗಳೂರು, ಸಿದ್ದಾಪುರ, ಸುಳ್ಯ, ಶೃಂಗೇರಿಯಲ್ಲಿ ಮಳೆಯಾಗಿದೆ. ಪುತ್ತೂರು, ಧರ್ಮಸ್ಥಳ, ಬೆಳ್ತಂಗಡಿ, ಶಕ್ತಿನಗರ, ಮಂಕಿ, ಪೊನ್ನಂಪೇಟೆ, ಕಮ್ಮರಡಿ, ಕಳಸ, ಪರಶುರಾಂಪುರ, ಜಯಪುರ, ವೈಎನ್ ಹೊಸಕೋಟೆ, ಕುಶಾಲನಗರ, ಮುಲ್ಕಿ, ಹೊನ್ನಾವರ, ಅಂಕೋಲಾ, ಕೋಟಾ, ಕುಮಟಾ, ಶಿರಾಲಿ, ಹುಂಚದಕಟ್ಟೆ, ಕೊಟ್ಟಿಗೆಹಾರ, ಎನ್ಆರ್ ಪುರ, ಉಡುಪಿ, ಹಿರೆಕೆರೂರು, ಲಕ್ಷ್ಮೇಶ್ವರ, ದೊಡ್ಡಬಳ್ಳಾಪುರ, ತ್ಯಾಗರ್ತಿ, ಜಗಳೂರು, ಭದ್ರಾವತಿ, ಕೃಷ್ಣರಾಜಪೇಟೆಯಲ್ಲಿ ಮಳೆಯಾಗಿದೆ.