ಮಂಗಳೂರು:ಜಿಲ್ಲೆಯಲ್ಲಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಸ್ಪೀಕರ್ ಯು.ಟಿ. ಖಾದರ್ ಅವರು ಸೋಮವಾರ ರೋಮ್ನಿಂದ ಕಲ್ಲಿಕೋಟೆ ಮೂಲಕ ಮಂಗಳೂರಿಗೆ ಬಂದು ಜಿಲ್ಲೆಯ ಪ್ರಾಕೃತಿಕ ಸ್ಥಿತಿಗತಿ ಪರಿಶೀಲನೆ ನಡೆಸಿದರು. ಜಿಲ್ಲಾ ಪಂಚಾಯತ್ ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಜಿಲ್ಲೆಯ
ವಿವಿಧ ತಾಲೂಕು ಅಧಿಕಾರಿಗಳಿಂದ ವೀಡಿಯೋ ಸಂವಾದ ಮೂಲಕ ಪ್ರಾಕೃತಿಕ ವಿಕೋಪದ ಮಾಹಿತಿ ಪಡೆದರು.ಗುಡ್ಡ ಸಮೀಪ ಮನೆಯಲ್ಲಿ ವಾಸ್ತವ್ಯದಲ್ಲಿರುವವರಿಗೆ ಮುಂದಿನ ಎರಡು ದಿನಗಳವರೆಗೆ ತಂಗದಂತೆ ತಿಳಿಸಬೇಕು. ರಸ್ತೆ, ವಿದ್ಯುತ್ ತೊಂದರೆಗಳನ್ನು ಎದುರಿಸಲು ಅಗತ್ಯ ಯಂತ್ರೋಪಕರಣಗಳೊಂದಿಗೆ ಸನ್ನದ್ಧರಾಗಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.ಪ್ರಕೃತಿ ವಿಕೋಪ ತೀವ್ರವಾಗಿರುವುದರಿಂದ ರೆಸಾಟ್೯ ಗಳಿಗೆ ಬರುವ ಪ್ರವಾಸಿಗರಿಗೆ ವಾಸ್ತವ್ಯ ಹೂಡದಂತೆ ಮನವರಿಕೆ ಮಾಡಬೇಕು ಎಂದು ಸೂಚಿಸಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್, ಜಿ.ಪಂ. ಸಿಇಓ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮತ್ತಿತರರು ಇದ್ದರು.