The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: 67 ಸಾಧಕರು, 10 ಸಂಸ್ಥೆಗಳಿಗೆ ಪ್ರಶಸ್ತಿ

by ದಿ ಸುಳ್ಯ ಮಿರರ್ ಸುದ್ದಿಜಾಲ October 30, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 30, 2022
Share this article

ಬೆಂಗಳೂರು: ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು,ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ ೬೭ ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ೧೦ ಸಂಘ-ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದೆ. ಪದ್ಮ ಪ್ರಶಸ್ತಿ ಮಾದರಿಯಲ್ಲಿ ಈ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವರ್ಷ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ ಹೊಸತನವನ್ನು ಮೆರೆದಿದೆ. ತೆರೆಮರೆಯಲ್ಲಿದ್ದ ಅರ್ಹ ಸಾಧಕರು, ಸಮಾಜದ ಹಿತಕ್ಕಾಗಿ ಗಣನೀಯ ಸೇವೆ ಸಲ್ಲಿಸಿದ ಹತ್ತು ಸಂಘ-ಸಂಸ್ಥೆಗಳನ್ನು ಸರಕಾರ ಗುರುತಿಸಿದೆ. ಸಾಧಕರನ್ನು ರಾಜ್ಯೋತ್ಸವ ಆಯ್ಕೆ ಸಮಿತಿ ಹಾಗೂ ಸರಕಾರವೇ ಗುರುತಿಸಿ ನೀಡಿರುವುದು ಈ ಬಾರಿಯ ವಿಶೇಷ. ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿಯನ್ನು ಪರಿಗಣಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಮೊದಲೇ ಪ್ರಕಟಿಸಿದ್ದರು. ಆದಾಗಿಯೂ ಸಾಕಷ್ಟು ಅರ್ಜಿಗಳು ಬಂದಿದ್ದವು. ಈ ಪಟ್ಟಿಯಲ್ಲಿರುವ ಕೆಲ ಸಾಧಕರನ್ನೂ ಆಯ್ಕೆ ಸಮಿತಿ ಪರಿಗಣಿಸಿದ್ದು, ಒಟ್ಟಾರೆಯಾಗಿ ಸಮತೂಕದ ಪಟ್ಟಿ ಸಿದ್ದಗೊಂಡಿದೆ.
ಇಸ್ರೋ ಮಾಜಿ ನಿರ್ದೇಶಕ ಶಿವನ್‌, ಹಿರಿಯ ಸಾಹಿತಿ ಅ.ರಾ.ಮಿತ್ರ, ಪ್ರೊ.ಕೃಷ್ಣೇಗೌಡ, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ವಿಕಲಚೇತನ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್‌, ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌, ಸೋಲಿಗ ಸಮುದಾಯದಲ್ಲಿ ಸಹಕಾರದ ಬೆಳಕು ಚೆಲ್ಲಿದ ಸೋಲಿಗರ ಮಾದಮ್ಮ, ವನಸಂರಕ್ಷಣೆಗಾಗಿ ಜೀವನವನ್ನೇ ಮುಡುಪಾಗಿಟ್ಟ ರಾಮನಗರದ ಸಾಲುಮರದ ನಿಂಗಣ್ಣ, ಹಿರಿಯ ಚಲನಚಿತ್ರನಟರಾದ ದತ್ತಣ್ಣ, ಅವಿನಾಶ್‌, ಪೌರ ಸೇನಾನಿ ಶ್ರೀಮತಿ ಮಲ್ಲಮ್ಮ, ಉಡುಪಿ ಜಿಲ್ಲೆಯ ದೈವನರ್ತಕ ಗುಡ್ಡ ಪಾಣಾರ, ಕಿರುತೆರೆ ನಟ ಸಿಹಿಕಹಿ ಚಂದ್ರು, ಯಕ್ಷಗಾನ ಕಲಾವಿದರಾದ ಡಾ. ಎಂ.ಪ್ರಭಾಕರ ಜೋಷಿ, ಸುಬ್ರಹ್ಮಣ್ಯ ಧಾರೇಶ್ವರ, ವೀರಗಾಸೆ ಕಲಾವಿದ ಹಾವೇರಿಯ ಮಹೇಶ್ವರ ಗೌಡ ಲಿಂಗದಹಳ್ಳಿ, ಕಮಲಮ್ಮ ಸೂಲಗಿತ್ತಿ, ಹಿರಿಯ ಸಂಗೀತ ವಿದ್ವಾಂಸ ಅನಂತಾಚಾರ್ಯ ಬಾಳಾಚಾರ್ಯ, ಹಿರಿಯ ಪತ್ರಕರ್ತರಾದ ಎಚ್.ಆರ್. ಶ್ರೀಶ, ಜಿ.ಎಂ.ಶಿರಹಟ್ಟಿ, ಹಿರಿಯ ಸಂಶೋಧಕ ಡಾ.ಎಂ.ಜಿ.ನಾಗರಾಜ್‌ ಸೇರಿದಂತೆ 67 ಜನರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಾಮಾಜದ ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಗುರುತಿಸುವಲ್ಲೂ ಸಮಿತಿ ವಿಶೇಷ ಆಸಕ್ತಿ ನೀಡಿದೆ. ಈ ಪಟ್ಟಿಯಲ್ಲಿ ಇಸ್ರೋ ಮಾಜಿ ನಿರ್ದೇಶಕ ಶಿವನ್, ಸಾಹಿತಿ ಪ್ರೊ.ಕೃಷ್ಣೇಗೌಡ, ಅ.ರಾ.ಮಿತ್ರ, ವಿಭಿನ್ನ ಪಾತ್ರಗಳ ಮೂಲಕ ಚಲನಚಿತ್ರ ರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ದತ್ತಣ್ಣ, ಅವಿನಾಶ, ಕಿರುತೆರೆ ದಿಗ್ಗಜ ಸಿಹಿಕಹಿ ಚಂದ್ರು, ಇಂಗ್ಲೀಷ್‌ ಕಡಲ್ಗಾಲುವೆ ಈಜಿದ ಪ್ಯಾರಾ ಒಲಂಪಿಕ್‌ ಕ್ರೀಡಾಪಟು ರಾಘವೇಂದ್ರ ಅಣ್ವೇಕರ್‌, ದಲಿತ ಯುವಕರನ್ನು ಉದ್ಯಮಿಯಾಗಿ ರೂಪಿಸುವಲ್ಲಿ ಅವಿರತ ಶ್ರಮಿಸಿದ ಕೋಲಾರದ ಉದ್ಯಮಿ ಜೆ,ಶ್ರೀನಿವಾಸನ್‌, ಶಿಕ್ಷಣ ತಜ್ಞ ಸುಬ್ಬರಾವ್‌ ಶೆಟ್ಟಿ ಅವರನ್ನು ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಜಾತಿ, ಪ್ರಾದೇಶಿಕ ನ್ಯಾಯ ಸೇರಿದಂತೆ ಎಲ್ಲ ಆಯಾಮಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಹತ್ತು ಸಮಾಜ ಸೇವಾ ಸಂಘಟನೆಗಳನ್ನು ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮೈಸೂರಿನ ರಾಮಕೃಷ್ಣ ಆಶ್ರಮ, ಬೆಂಗಳೂರಿನ ಅಮೃತ ಶಿಶು ನಿವಾಸ, ಸುಮನಾ ಪೌಂಡೇಶನ್‌, ಹಾವೇರಿಯ ಅಗಡಿ ಫಾರ್ಮ್ಸ್‌ , ಗದಗ ಜಿಲ್ಲೆಯ ಲಿಂಗಾಯತ ಪ್ರಗತಿಶೀಲ ಸಂಸ್ಥೆ ಸೇರಿದಂತೆ ಹತ್ತು ಸಾಮಾಜಿಕ ಸಂಘಟನೆಯನ್ನು ಆಯ್ಕೆ ಮಾಡಲಾಗಿದೆ.
2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ 67 ಜನರ ಪಟ್ಟಿ
:

ಚಲನಚಿತ್ರ ಕ್ಷೇತ್ರ
ದತ್ತಣ್ಣ -ಚಿತ್ರದುರ್ಗ
ಅವಿನಾಶ್‌-ಬೆಂಗಳೂರು

ಕಿರುತೆರೆ
ಸಿಹಿಕಹಿ ಚಂದ್ರು – ಬೆಂಗಳೂರು

ಸಂಕೀರ್ಣ ಕ್ಷೇತ್ರ
ಸುಬ್ಬರಾಮ ಶೆಟ್ಟಿ, ಆರ್‌ವಿ ಸಂಸ್ಥೆಗಳು, – ಬೆಂಗಳೂರು
ವಿದ್ವಾನ್‌ ಗೋಪಾಲಕೃಷ್ಣ ಶರ್ಮಾ- ಬೆಂಗಳೂರು
ಸೋಲಿಗರ ಮಾದಮ್ಮ- ಚಾಮರಾಜನಗರ

ಸೈನಿಕ ಕ್ಷೇತ್ರ
ಸುಬೇದಾರ್‌ ಬಿ.ಕೆ.ಕುಮಾರಸ್ವಾಮಿ- ಬೆಂಗಳೂರು

ಪತ್ರಿಕೋದ್ಯಮ
ಹೆಚ್‌.ಆರ್‌.ಶ್ರೀಶಾ- ಬೆಂಗಳೂರು
ಜಿ.ಎಂ.ಶಿರಹಟ್ಟಿ- ಗದಗ

ವಿಜ್ಞಾನ ಮತ್ತು ತಂತ್ರಜ್ಞಾನ
ಕೆ.ಶಿವನ್‌- ಬೆಂಗಳೂರು
ಡಿ.ಆರ್‌.ಬಳೂರಗಿ- ರಾಯಚೂರು

ಕೃಷಿ
ಗಣೇಶ್ ತಿಮ್ಮಯ್ಯ- ಕೊಡಗು
ಚಂದ್ರಶೇಖರ್ ನಾರಾಯಣಪುರ- ಚಿಕ್ಕಮಗಳೂರು

ಪರಿಸರ
ಸಾಲುಮರದ ನಿಂಗಣ್ಣ- ರಾಮನಗರ

ಪೌರಕಾರ್ಮಿಕ ಕ್ಷೇತ್ರ
ಮಲ್ಲಮ್ಮ ಹೂವಿನಹಡಗಲಿ- ವಿಜಯನಗರ

ಆಡಳಿತ
ಎಲ್‌.ಹೆಚ್‌.ಮಂಜುನಾಥ್‌- ಶಿವಮೊಗ್ಗ
ಮದನ್ ಗೋಪಾಲ್‌- ಬೇಂಗಳೂರು

ಹೊರನಾಡು
ದೇವಿದಾಸ ಶೆಟ್ಟಿ- ಮುಂಬಯಿ
ಅರವಿಂದ್ ಪಾಟೀಲ್‌- ಹೊರನಾಡು
ಕೃಷ್ಣಮೂರ್ತಿ ಮಾಂಜಾ- ತೆಲಂಗಾಣ

ಹೊರದೇಶ
ರಾಜ್‌ಕುಮಾರ್‌- ಗಲ್ಫ್‌

ವೈದ್ಯಕೀಯ
ಡಾ.ಹೆಚ್‌.ಎಸ್‌.ಮೋಹನ್‌- ಶಿವಮೊಗ್ಗ
ಡಾ.ಬಸವಂತಪ್ಪ- ದಾವಣಗೆರೆ

ಸಂಗೀತ
ನಾರಾಯಣ.ಎಂ- ದಕ್ಷಿಣ ಕನ್ನಡ
ಅನಂತಚಾರ್ಯ ಬಾಳಾಚಾರ್ಯ- ಧಾರವಾಡ
ಅಂಜಿನಪ್ಪ ಸತ್ಪಾಡಿ- ಚಿಕ್ಕಬಳ್ಳಾಪುರ
ಅನಂತ ಕುಲಕರ್ಣಿ- ಬಾಗಕೋಟೆ

ಜಾನಪದ
ಸಹಮದೇವಪ್ಪ ಈರಪ್ಪ ನಡಿಗೇರ್‌- ಉತ್ತರ ಕನ್ನಡ
ಗುಡ್ಡ ಪಾಣಾರ- ಉಡುಪಿ
ಕಮಲಮ್ಮ ಸೂಲಗಿತ್ತಿ- ರಾಯಚೂರು
ಸಾವಿತ್ರಿ ಪೂಜಾರ್‌-ಧಾರವಾಡ
ರಾಚಯ್ಯ ಸಾಲಿಮಠ- ಬಾಗಕೋಟೆ
ಮಹೇಶ್ವರ್ ಗೌಡ- ಹಾವೇರಿ

ಯಕ್ಷಗಾನ
ಶ್ರೀ ಎಂ.ನ.ನಾಯಕ್ -ಉಡುಪಿ
ಶ್ರೀ ಸುಬ್ರಹ್ಮಣ್ಯ ಧಾರೇಶ-ಉತ್ತರ ಕನ್ನಡ
ಶ್ರೀ ಸರಪಾಡಿ ಅಶೋಕ್ ಶೆಟ್ಟಿ -ದಕ್ಷಿಣ ಕನ್ನಡ

ಬಯಲಾಟ
ಶ್ರೀ ಅಡವಯ್ಯ ಚ ಹಿರೇಮಠ್ ( ದೊಡ್ಡಾಟ) ಧಾರವಾಡ
ಶ್ರೀ ಶಂಕರಪ್ಪ ಮಲ್ಲಪ್ಪ ಹೊರಪೇಟೆ ಕೊಪ್ಪಳ
ಶ್ರೀ ಹೆಚ್ ಪಾಂಡುರಂಗಪ್ಪ ತಂದೆ ಹೆಚ್.ಮೀನಾಕ್ಷಪ್ಪ ಬಳ್ಳಾರಿ

ಸಾಹಿತ್ಯ
ಶ್ರೀ ಶಂಕರ ಚಚಡಿ -ಬೆಳಗಾವಿ
ಪ್ರೊ.ಕೃಷ್ಣೇಗೌಡ -ಮೈಸೂರು
ಶ್ರೀ ಅಶೋಕ್ ಬಾಬು ನೀಲಗಾರ್ -ಬೆಳಗಾವಿ
ಪ್ರೊ.ಅ.ರಾ.ಮಿತ್ರ -ಹಾಸನ
ಶ್ರೀ ರಾಮಕೃಷ್ಣ ಮರಾಠೆ -ಕಲಬುರಗಿ

ಶಿಕ್ಷಣ
ಶ್ರೀ ಕೋಟಿ ರಂಗಪ್ಪ -ತುಮಕೂರು
ಡಾ.ಎಂ.ಜಿ.ನಾಗರಾಜ್ ಸಂಶೋಧಕರು- ಬೆಂಗಳೂರು

ಕ್ರೀಡೆ
ಶ್ರೀ ದತ್ತಾತ್ರೇಯ ಗೋವಿಂದ ಕುಲಕರ್ಣಿ- ಧಾರವಾಡ
ಶ್ರೀ ರಾಘವೇಂದ್ರ ಅಣ್ಣೀಕರ್ -ಬೆಳಗಾವಿ

ನ್ಯಾಯಾಂಗ
ಶ್ರೀ ವೆಂಕಚಾಚಲಪತಿ- ಬೆಂಗಳೂರು
ಶ್ರೀ ನಂಜುಂಡ ರೆಡ್ಡಿ- ಬೆಂಗಳೂರು

ನೃತ್ಯ
ಶ್ರೀ ಕಮಲಾಕ್ಷಾಚಾರ್ಯ- ದಕ್ಷಿಣ ಕನ್ನಡ

ಸಮಾಜಸೇವೆ
ಶ್ರೀ ರವಿ ಶೆಟ್ಟಿ- ದಕ್ಷಿಣ ಕನ್ನಡ
ಶ್ರೀ ಸಿ.ಕರಿಯಪ್ಪ -ಬೆಂಗಳೂರು ಗ್ರಾಮಾಂತರ
೩.ಶ್ರೀ ಎಂ.ಎಸ್.ಕೋರಿ ಶೆಟ್ಟರ್- ಹಾವೇರಿ
೪.ಶ್ರೀ ಡಿ.ಮಾದೇಗೌಡ- ಮೈಸೂರು
೫.ಶ್ರೀ ಬಲಬೀರ್ ಸಿಂಗ್ -ಬೀದರ್

ವಾಣಿಜ್ಯೋದ್ಯಮ
ಶ್ರೀ ಬಿ.ವಿ.ನಾಯ್ಡು -ಬೆಂಗಳೂರು
ಶ್ರೀ ಜಯರಾಮ ಬನಾನ್- ಉಡುಪಿ
ಶ್ರೀ ಜಿ.ಶ್ರೀನಿವಾಸ್ -ಕೋಲಾರ

ರಂಗಭೂಮಿ
ಶ್ರೀ ತಿಪ್ಪಣ್ಣ ಹೆಳವರ್ ಯಾದಗಿರಿ
ಶ್ರೀಮತಿ ಲಲಿತಾಬಾಯಿ ಚನ್ನದಾಸರ್- ವಿಜಯಪುರ
ಶ್ರೀ ಗುರುನಾಥ್ ಹೂಗಾರ್ -ಕಲಬುರಗಿ
ಶ್ರೀ ಎಂ.ಪ್ರಭಾಕರ ಜೋಶಿ-ತಾಳಮದ್ದಳೆ-ಯಕ್ಷಗಾನ ಉಡುಪಿ
ಶ್ರೀ ಶೈಲ ಹುದ್ದಾರ್ -ಹಾವೇರಿ

ಸಂಘ ಸಂಸ್ಥೆಗಳು
೧.ಶ್ರೀ ರಾಮಕೃಷ್ಣ ಆಶ್ರಮ -ಮೈಸೂರು
೨.ಲಿಂಗಾಯುತ ಪ್ರಗತಿಶೀಲ ಸಂಸ್ತೆ -ಗದಗ
೩.ಅಗಡಿ ತೋಟ -ಹಾವೇರಿ
೪.ತಲಸೇಮಿಯಾ ಮತ್ತು ಹೀಮೋಫೀಲಿಯ ಸೊಸೈಟಿ- ಬಾಗಲಕೋಟೆ
೫.ಅಮೃತ ಶಿಶು ನಿವಾಸ ಬೆಂಗಳೂರು
೬.ಸುಮನಾ ಫೌಂಡೇಶನ್ ಬೆಂಗಳೂರು
೭.ಯುವವಾಹಿನಿ ಸಂಸ್ಥೆ- ದಕ್ಷಿಣ ಕನ್ನಡ
೮.ನೆಲೆ ಫೌಂಡೇಶನ್, ಅನಾಥ ಮಕ್ಕಳ ಪುನರ್ವಸತಿ ಕೇಂದ್ರ -ಬೆಂಗಳೂರು
೯.ನಮ್ಮನೆ ಸುಮ್ಮನೆ-ನಿರಾಶ್ರಿತ ಆಶ್ರಮ (ಮಂಗಳಮುಖಿ ಸಂಸ್ಥೆ) -ಬೆಂಗಳೂರು
೧೦.ಶ್ರೀ ಉಮಾಮಪೇಶ್ವರಿ ಹಿಂದುಳಿದ ವರ್ಗ ಅಭಿವೃದ್ದಿ ಟ್ರಸ್ಟ್ -ಮಂಡ್ಯ

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಎಚ್. ಶಾಂತಾರಾಮ್ ಯಕ್ಷಗಾನ ಪುರಸ್ಕಾರ’ಕ್ಕೆ ಭವ್ಯಶ್ರೀ ಕುಲ್ಕುಂದ ಆಯ್ಕೆ
next post
ಟ್ವೆಂಟಿ-20 ವಿಶ್ವಕಪ್: ಭಾರತ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಗೆಲುವು

You may also like

ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ:...

June 4, 2023

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ...

June 4, 2023

ಅರೆಭಾಷೆ ರಸಾಯನ: ಐತಾರದ ಪೊಳ್ಮೆ.. ಪೂರಾ ಹೆಳ್ಮಕ್ಕಳಿಗೆ ಕೊಟ್ಟರೆ ಗಳ್ಮಕ್ಕಳಿಗೆ...

June 4, 2023

ಸರಕಾರದ ಗ್ಯಾರಂಟಿ ಯೋಜನೆ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ...

June 3, 2023

5 ಗ್ಯಾರಂಟಿ ಯೋಜನೆಗಳಂತಹಾ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‌ನಿಂದ ಮಾತ್ರ...

June 3, 2023

ಬಾಲಸೋರ್ ರೈಲು ಅಪಘಾತ: ಮೃತರ ಸಂಖ್ಯೆ 233 ಕ್ಕೆ, 900...

June 3, 2023

ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ರೂ.,...

June 2, 2023

ಒಡಿಶಾದ ಬಾಲಸೋರ್​​ನಲ್ಲಿ ರೈಲು ಅಪಘಾತ: 50 ಮಂದಿ ಸಾವು: 300...

June 2, 2023

ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಅನುಷ್ಠಾನ ಹೇಗೆ.? ಷರತ್ತುಗಳು ಏನು..?...

June 2, 2023

ಐದೂ ಗ್ಯಾರಂಟಿಗಳ ಜಾರಿಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ