ಕೋಲ್ಕತ್ತ: ರಣಜಿ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬಂಗಾಳದ ವಿರುದ್ಧ 9 ವಿಕೆಟ್ ಅಂತರದಿಂದ ಗೆಲುವು ಸಾಧಿಸಿರುವ ಸೌರಾಷ್ಟ್ರ, ಚಾಂಪಿಯನ್ ಆಗಿ ಹೊರಹೊಮ್ಮಿದೆ.ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಪಂದ್ಯದ ಮೊದಲ

ಇನ್ನೀಂಗ್ಸ್ನಲ್ಲಿ ಬಂಗಾಳ 54.1 ಓವರ್ಗಳಲ್ಲಿ 174 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಸೌರಾಷ್ಟ್ರ ಮೊದಲ ಇನಿಂಗ್ಸ್ನಲ್ಲಿ 110 ಓವರ್ಗಳಲ್ಲಿ 404 ರನ್ ಗಳಿಸುವ ಮೂಲಕ 230 ರನ್ ಮುನ್ನಡೆ ಸಾಧಿಸಿತ್ತು.ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿದ ಬಂಗಾಳ 241 ಗಳಿಸಿತು ಆಲೌಟ್ ಆಗುವ ಮೂಲಕ 11 ರನ್ಗಳ ಸುಲಭ ಗುರಿ ನೀಡಿತ್ತು. ಈ ಗುರಿಯನ್ನು ಸೌರಾಷ್ಟ್ರ 1 ವಿಕೆಟ್ ಕಳೆದುಕೊಂಡು ತಲುಪಿತು.ಎರಡು ಇನ್ನಿಂಗ್ಸ್ಗಳಲ್ಲಿ 9 ವಿಕೆಟ್ ಪಡೆಯುವ ಮೂಲಕ ಜೈದೇವ್ ಉನದ್ಕತ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಟೂರ್ನಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ ಅರ್ಪಿತ್ ವಾಸವಡ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.