ಸುಳ್ಯ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ಘಟಕ ಮತ್ತು ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಸುಳ್ಯ ವರ್ತಕರ ಸಮುದಾಯ ಭವನದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ ರಿಗೆ ಸನ್ಮಾನ ಸಮಾರಂಭ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು
ರೆಡ್ ಕ್ರಾಸ್ ಸಭಾಪತಿ ಹಾಗೂ ಸುಳ್ಯ ವರ್ತಕ ಸಂಘದ ಅಧ್ಯಕ್ಷ ಪಿ. ಬಿ. ಸುಧಾಕರ ರೈ ವಹಿಸಿದ್ದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ. ಬಿ. ಹರೀಶ್ ರೈ ಅಭಿನಂದನಾ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ನೆಹರುಸ್ಮಾರಕ ಮಹಾವಿದ್ಯಾಲಯದ ಪ್ರಾದ್ಯಾಪಕ ಸಂಜೀವ ಕುದ್ಪಾಜೆ,ವರ್ತಕರ ಸಂಘದ ಕಾರ್ಯದರ್ಶಿ ಗಿರೀಶ್ ಡಿ.ಎಸ್, ರೆಡ್ ಕ್ರಾಸ್ ಕಾರ್ಯದರ್ಶಿ ತಿಪ್ಪೇಶಪ್ಪ, ರೆಡ್ ಕ್ರಾಸ್ ಉಪಸಭಾಪತಿ ಕೆ. ಎಂ. ಮುಸ್ತಫ, ಮಾಜಿ ಜಿ. ಪಂ. ಸದಸ್ಯ ಎಸ್. ಎನ್. ಮನ್ಮಥ, ಎ. ಪಿ. ಎಂ. ಸಿ. ಮಾಜಿ ನಿರ್ದೇಶಕ ಆದಂ ಹಾಜಿ ಕಮ್ಮಾಡಿ, ವರ್ತಕ ಸಂಘದ ಉಪಾಧ್ಯಕ್ಷ ಅಬ್ದುಲ್ ಹಮೀದ್ ಜನತಾ, ರಾಮಚಂದ್ರ ಭಾರತ್ ಆಗ್ರೋ, ಪ್ರಭಾಕರನ್ ನಾಯರ್, ರೆಡ್ ಕ್ರಾಸ್ ಜಿಲ್ಲಾ ಪ್ರತಿನಿಧಿ ಗಣೇಶ್ ಭಟ್, ಪ್ರಮೀಳಾ, ಲತಾ ಕುದ್ಪಾಜೆ, ವಿನುತಾ ಪಾತಿಕಲ್ಲು ಮತ್ತಿತರರು ಉಪಸ್ಥಿತರಿದ್ದರು