ಸುಳ್ಯ:ರೋಟರಿ ಕ್ಲಬ್ ಸುಳ್ಯ, ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನರ್ ವ್ಹೀಲ್ ಕ್ಲಬ್, ಎನ್ಎನ್ಎಸ್ ವೈಆರ್ಸಿ ರೆಡ್ ರಿಬ್ಬನ್ ಕ್ಲಬ್ ಎನ್.ಎಂ.ಸಿ ಮತ್ತು ಸುಳ್ಯದ ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಇದರ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಮತ್ತು ರೆಡ್ಕ್ರಾಸ್ ಸೊಸೈಟಿಯ ಸಹಯೋಗದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಸುಳ್ಯದ ರೋಟರಿ ಸಮುದಾಯ ಭವನದಲ್ಲಿ ನಡೆಯಿತು.
ಶಿಬಿರವನ್ನು ತಾಲೂಕು ಆರೋಗ್ಯಾಧಿಕಾರಿ ಡಾ. ನಂದಕುಮಾರ್ ಉದ್ಘಾಟಿಸಿ ಮಾತನಾಡಿ ಜಗತ್ತಿನ
ಮಹಾದಾನಗಳಲ್ಲಿ ರಕ್ತದಾನ ಒಂದು. ರಕ್ತದಾನ ಮಾಡುವ ಮೂಲಕ ಹಲವು ರೋಗಗಳು ನಮ್ಮ ದೇಹಕ್ಕೆ ನುಸುಳದಂತೆ ಮಾಡುತ್ತದೆ. ರಕ್ತದಾನ ಮಾಡುವುದರಿಂದ ನಮಗೆ ಯಾವುದೇ ಅಡ್ಡ ಪರಿಣಾಮಗಳಿಲ್ಲ. ಈ ಬಗ್ಗೆ ಸಮಾಜದಲ್ಲಿ ಜಾಗೃತಿ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷ ಆನಂದ ಖಂಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕಿನ ಮೆಡಿಕಲ್ ಆಫೀಸರ್ ಡಾ. ರಾಮಚಂದ್ರ ಭಟ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕು ಘಟಕದ ಸಭಾಪತಿ ಪಿ.ಬಿ.ಸುಧಾಕರ್ ರೈ, ಯುವ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ಸಂಜೀವ ಕುದ್ಪಾಜೆ ಭಾಗವಹಿಸಿದರು,
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸುಳ್ಯ ಸಿಟಿ ಅಧ್ಯಕ್ಷ ಗಿರೀಶ್ ನಾರ್ಕೋಡು, ಇನ್ನರ್ ವ್ಹೀಲ್ ಅಧ್ಯಕ್ಷೆ ಸವಿತಾ ನಾರ್ಕೋಡು, ರೋಟರಿ ಕ್ಲಬ್ ಸುಳ್ಯ ಸಿಟಿ ಕಾರ್ಯದರ್ಶಿ ಚೇತನ್ ಪಿ.ಎನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ಚಿಂತನ ಸುಬ್ರಹ್ಮಣ್ಯ, ರೋಟರಿ ಕ್ಲಬ್ ಕಾರ್ಯದರ್ಶಿ ಕಸ್ತೂರಿ ಶಂಕರ್, ಮಾರ್ನಿಂಗ್ ಕ್ರಿಕೆಟ್ ಕ್ಲಬ್ ಅದ್ಯಕ್ಷ ಗಿರೀಶ್ ಅಡ್ಪಂಗಾಯ, ಎನ್.ಎಂ.ಸಿಯ ಎನ್ಎನ್ಎಸ್ ವೈಆರ್ಸಿ ರೆಡ್ ರಿಬ್ಬನ್ ಕ್ಲಬ್ನ ಘಟಕಾಧಿಕಾರಿ ಚಿತ್ರಲೇಖ ಕೆ.ಎಸ್ ಉಪಸ್ಥಿತರಿದ್ದರು.