ಸುಳ್ಯ:ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಪಿ.ಸಿ.ಜಯರಾಮರಿಗೆ ಕರ್ನಾಟಕ ಸರಕಾರವು ಸಹಕಾರ ರತ್ನ ಪ್ರಶಸ್ತಿ ಘೋಷಿಸಿದೆ.ಸುಳ್ಯ ಬ್ಲಾಕ್ನ ಅಧ್ಯಕ್ಷರಾಗಿರುವ ಪಿ.ಸಿ.ಜಯರಾಮ, ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷರಾಗಿ 1997ರಿಂದ 2007ರವರೆಗೆ ಹಾಗೂ 2020 ರಿಂದ 2025 ವರೆಗೆ 15ವರ್ಷಗಳ ಕಾಲ
ಅಧ್ಯಕ್ಷರಾಗಿ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ನಿರಂತರ 37 ವರ್ಷ ಸೇವೆ ಸಲ್ಲಿಸಿದ್ದರು. ಟಿಎಪಿಸಿಎಂಎಸ್ನ ನಿರ್ದೇಶಕರಾಗಿ. ದ.ಕ. ಕೃಷಿ ಅಭಿವೃದ್ಧಿ ಸಹಕಾರಿ ಸಂಘ ಮಂಗಳೂರು ಇದರ ನಿರ್ದೇಶಕರಾಗಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ, ಮಡಪ್ಪಾಡಿ ಗ್ರಾ.ಪಂ. ಸದಸ್ಯರಾಗಿ, ಸುಳ್ಯ ತಾ.ಪಂ.ಸದಸ್ಯ ಹಾಗೂ ಉಪಾಧ್ಯಕ್ಷರಾಗಿ ಸೇರಿದಂತೆ ಸೇವೆ ಸಲ್ಲಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭವು ನ. 14ರಂದು ಬೆಂಗಳೂರು ಪ್ಯಾಲೇಸ್ ಗ್ರೌಂಡ್ನಲ್ಲಿ ಏರ್ಪಡಿಸಲಾಗುವ ಸಹಕಾರ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಉಪಸ್ಥಿತಿಯಲ್ಲಿ ಪ್ರದಾನ ನಡೆಯಲಿದೆ ಎಂದು ತಿಳಿದು ಬಂದಿದೆ.












