ಸುಳ್ಯ: ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್ ಗೆ ಕರ್ನಾಟಕ ರಾಜ್ಯ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್ ತೆಕ್ಕಿಲ್ ಭೇಟಿ ನೀಡಿ ದರ್ಗಾ ಶರೀಫ್ ಗೆ ಚಾದರ ಸಮರ್ಪಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ದರ್ಗಾ ಶರೀಫ್ ಅಧ್ಯಕ್ಷರಾದ
ಹನೀಫ ಹಾಜಿ ಮತ್ತು ಆಡಳಿತ ಮಂಡಳಿ ಸದಸ್ಯರು ಟಿ. ಎಂ. ಶಹೀದ್ ಅವರನ್ನು ದರ್ಗಾದ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಸುಳ್ಯ ನಗರ ಯೋಜನಾ ಪ್ರಾಧಿಕಾರ ( ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ, ಕನಕಮಜಲು ಜುಮ್ಮಾ ಮಸ್ಜಿದ್ ಕಾರ್ಯದರ್ಶಿ ಇಕ್ಬಾಲ್ ಸುಣ್ಣ ಮೂಲೆ, ದರ್ಗಾ ಸಮಿತಿ ಸದಸ್ಯರು ಮತ್ತು ಸಿಬ್ಬಂದಿ ವರ್ಗ ದವರು ಉಪಸ್ಥಿತರಿದ್ದರು.












