ಸಂಪಾಜೆ:ಸಂಪಾಜೆ ಗ್ರಾಮ ಪಂಚಾಯತ್ ಶ್ರೀವಿಷ್ಣು ಸಂಜೀವಿನಿ ಒಕ್ಕೂಟ, ಸ್ತ್ರೀಶಕ್ತಿ ಸಂಘಗಳು ಹಾಗೂ ಆದರ್ಶ ಮಹಿಳಾ ಸಮಾಜ ವತಿಯಿಂದ ಆಟಿ ಕೂಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆಯಿತು ಕಾರ್ಯಕ್ರಮವನ್ನು
ನಿವೃತ್ತ ಉಪನ್ಯಾಸಕ ಚಿದಾನಂದ ಮಾಸ್ಟರ್ ಉದ್ಘಾಟಿಸಿದರು. ಅರೋಗ್ಯ ಶಿಕ್ಷಣ ಅಧಿಕಾರಿ ಪ್ರಮೀಳಾ ಆರೋಗ್ಯ ಮಾಹಿತಿ ನೀಡಿದರು.ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಯಮುನಾ ಬಿ. ಎಸ್, ಜಿ. ಕೆ. ಹಮೀದ್ ಗೂನಡ್ಕಸುಂದರಿ ಮುಂಡಡ್ಕ, ನಿವೃತ ಅಂಗನವಾಡಿ ಕಾರ್ಯಕರ್ತೆ ಜಯಂತಿ, ಸಂಜೀವಿನಿ ಒಕ್ಕೂಟದ ಕೃಷಿ ಸಖಿ ಮೋಹಿನಿ ವಿಶ್ವನಾಥ್, ನಿಕಟ ಪೂರ್ವ ಎಲ್. ಸಿ. ಆರ್. ಪಿ. ಯಶೋಧ ಅವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿ ದೀಪಿಕಾ, ಎನ್ ಆರ್ ಎಲ್ ಎಂ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ವೇತಾ,
ವಲಯ ಮೇಲ್ವಿಚಾರಕ ಮಹೇಶ್, ಜಯಲಕ್ಷ್ಮಿ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾ.ಪಂ. ಅಧ್ಯಕ್ಷೆ, ಸುಮತಿ ಶಕ್ತಿವೇಲು, ಉಪಾಧ್ಯಕ್ಷ ಎಸ್. ಕೆ. ಹನೀಫ್,
ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜ,ವಲಯ ಮೇಲ್ವಿಚಾರಕಿ ಕೌಶಲ್ಯ ರೂಪ ಮಾತನಾಡಿದರು. ಒಕ್ಕೂಟದ ಅಧ್ಯಕ್ಷೆ ದೇವಕಿ ಅಧ್ಯಕ್ಷತೆ ವಹಿಸಿದ್ದರು.ಗ್ರಾ.ಪಂ. ಸದಸ್ಯರಾದ ವಿಮಲಾ ಪ್ರಸಾದ್, ರಜನಿ ಶರತ್, ಅನುಪಮ, ಲಿಸ್ಸಿ ಮೊನಾಲಿಸಾ, ನಿಕಟ ಪೂರ್ವ ಒಕ್ಕೂಟದ ಅಧ್ಯಕ್ಷ ಶಿಲ್ಪಾ ಸನತ್, ಕಾರ್ಯದರ್ಶಿ ಕವಿತಾ ಪೆರಂಗೋಡಿ ಒಕ್ಕೂಟದ ಕಾರ್ಯದರ್ಶಿ ಲಲನ ಉಪಸ್ಥಿತರಿದ್ದರು. ಮೋಹಿನಿ ವಿಶ್ವನಾಥ್ ಸ್ವಾಗತಿಸಿ ಕಾಂತಿ ಬಿ. ಎಸ್ ಕಾರ್ಯಕ್ರಮ ನಿರೂಪಿಸಿದರು. ಎಲ್ ಸಿ ಆರ್ ಪಿ ಸೌಮ್ಯ ಸನ್ಮಾನ ಪತ್ರ ವಾಚಿಸಿದರು.














