ಸುಳ್ಯ: ಸಂಪಾಜೆ ಕಾಂಗ್ರೆಸ್ ಮುಖಂಡರ ನಿಯೋಗ ಕೆಪಿಸಿಸಿ ಮುಖಂಡರನ್ನು ಭೇಟಿ ಮಾಡಿ ಚರ್ಚೆ ನಡೆಸಿತು. ಸಂಪಾಜೆ ವಲಯ ಕಾಂಗ್ರೆಸ್ನಲ್ಲಿ ಕಳೆದ ಕೆಲವು ಸಮಯಗಳಿಂದ ಉಂಟಾಗಿರುವ ಆಂತರಿಕ ಸಮಸ್ಯೆಗಳನ್ನು ಪರಿಹರಿಸಬೇಕು. ಪಕ್ಷದ ಚಟುವಟಿಕೆಗಳಿಂದ ದೂರವಾಗಿ ತಟಸ್ಥರಾಗಿರುವ ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರನ್ನು ಮನವೊಲಿಸಿ ಮತ್ತೆ ಪಕ್ಷದಲ್ಲಿ ಸಕ್ರೀಯರಾಗಿ
ಮಾಡಬೇಕು ಎಂದು ಸಂಪಾಜೆಯ ಕಾಂಗ್ರೆಸ್ ಮುಖಂಡ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ ನೇತೃತ್ವದ ನಿಯೋಗ ಕಾಂಗ್ರೆಸ್ ಮುಖಂಡರಲ್ಲಿ ಬೇಡಿಕೆ ಇಟ್ಟಿದೆ.
ಕೆ.ಪಿ.ಸಿ.ಸಿ.ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ವಿನಯ್ ಕುಮಾರ್ ಸೊರಕೆ, ಕೆ.ಪಿ.ಸಿ.ಸಿ.ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ಮಂಜುನಾಥ್ ಭಂಡಾರಿ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ನೂತನ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ
![](https://thesulliamirror.com/wp-content/uploads/2024/03/IMG_20240328_112008.jpg)
ಎಚ್.ಎಸ್.ಮಂಜುನಾಥ್ ಗೌಡ ಅವರನ್ನು ನಿಯೋಗ ಬೆಂಗಳೂರಿನ ಕೆ.ಪಿ.ಸಿ.ಸಿ. ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿತು. ನಿಯೋಗದಲ್ಲಿ
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕ, ಕಾರ್ಮಿಕ ಮುಖಂಡರಾದ ಕೆ.ಪಿ.ಜಾನಿ, ಕೆ.ಪಿ.ಸಿ.ಸಿ.ವಕ್ತಾರರಾದ ಶೌವಾದ್ ಗೂನಡ್ಕ, ಸಂಪಾಜೆ ವಲಯ ಕಾಂಗ್ರೆಸ್ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ ಹಾಗೂ ಕಾಂಗ್ರೆಸ್ ಮುಖಂಡರಾದ ವಸಂತ ಗೌಡ ಪೆಲ್ತಡ್ಕ ಇದ್ದರು.