The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಅಭಿವೃದ್ಧಿ ಪಥದಲ್ಲಿ ಸಂಪಾಜೆ ಗ್ರಾಮ ಪಂಚಾಯತ್: ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರದ ಹಿರಿಮೆ

by ದಿ ಸುಳ್ಯ ಮಿರರ್ ಸುದ್ದಿಜಾಲ October 5, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 5, 2022
Share this article

ಸಂಪಾಜೆ: ಸುತ್ತಲೂ ಹರಡಿರುವ ಗಿರಿ ಶೃಂಗಗಳ ಮಧ್ಯೆ ಹಸಿರು ಹೊದ್ದು ಮಲಗಿರುವ ಪ್ರಕೃತಿ ಸಿರಿಯಿಂದ‌ ಸಂಪತ್ಪರಿಭತವಾದ ನಾಡು ದಕ್ಷಿಣ ಕನ್ನಡ ಜಿಲ್ಲೆಯ ತುತ್ತ ತುದಿಯ ಗ್ರಾಮ ಸಂಪಾಜೆ.‌ ಅಭಿವೃದ್ಧಿಯ ನಾಗಾಲೋಟದಲ್ಲಿ ಮುನ್ನುಗ್ಗುತ್ತಿರುವ ಸಂಪಾಜೆ ಗ್ರಾಮಕ್ಕೆ ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರದ ಹಿರಿಮೆ.ಕಳೆದ ವರ್ಷವೇ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದ್ದರೂ ಇದೀಗ ಪ್ರಶಸ್ತಿ ಮೊತ್ತ ಬಿಡುಗಡೆ ಮಾಡಿದ್ದು ಸುಳ್ಯ ತಾಲೂಕಿನಿಂದ ಸಂಪಾಜೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ. ಜಿ.ಕೆ.ಹಮೀದ್ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2014ರಲ್ಲಿ ಸಂಪಾಜೆ ಗ್ರಾಮ ಪಂಚಾಯತ್‌ಗೆ ಗಾಂಧಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಗ್ರಾಮ ಪುರಸ್ಕಾರ ಬಂದಿತ್ತು. ಇದೀಗ ಜಿ.ಕೆ.ಹಮೀದ್ ಸಾರಥ್ಯದಲ್ಲಿಯೇ ಸಂಪಾಜೆಗೆ ಮತ್ತೊಮ್ಮೆ‌ ಗಾಂಧಿ ಗ್ರಾಮ ಪುರಸ್ಕಾರ ಅರಸಿ ಬಂದಿದೆ.

ಅಭಿವೃದ್ಧಿ ಪರ್ವ:
ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಕೊಡಗು ಜಿಲ್ಲೆಯ ಸರ ಹದಿನಲ್ಲಿರುವ ಸಂಪಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಪಥದಲ್ಲಿ ಮುನ್ನಡೆದಿದ್ದು ಕಳೆದ ಒಂದು ದಶಕದಿಂದೀಚೆಗೆ ಸರ್ವತೋಮುಖ ಅಭಿವೃದ್ಧಿಗೆಯೆಡೆಗೆ ಮುಖ‌ ಮಾಡಿದೆ. ಅಭಿವೃದ್ಧಿಯ ಪಥದಲ್ಲಿರುವ ಗ್ರಾಮ ಪಂಚಾಯತ್‌ಗೆ ಮತ್ತೆ ಗಾಂಧಿ ಗ್ರಾಮ ಪುರಸ್ಕಾರ ಬಂದಿರುವುದು ಆಡಳಿತದ ಯಶಸ್ವಿಗೆ ಮತ್ತು ಗ್ರಾಮಾಭಿವೃದ್ಧಿಯ ಕಾಳಜಿಗೆ ಸಾಕ್ಷಿಯಾಗಿದೆ.ಪಂಚಾಯತ್ ಮುಂಭಾಗದಲ್ಲಿ ನಿರ್ಮಾಣವಾದ ಸುಂದರ ಉದ್ಯಾನವನ ಕಣ್ಮನ ಸೆಳೆಯುತಿದೆ. ಡಿಜಿಟಲ್ ಲೈಬ್ರೆರಿ ನಿರ್ಮಾಣ ಮಾಡಲಾಗಿದೆ. ಕೋಟಿಗೂ ಮಿಕ್ಕಿ ಅನುದಾನಲ್ಲಿ ಗ್ರಾಮದಲ್ಲಿ ಹಲವು ಗ್ರಾಮೀಣ ರಸ್ತೆಗಳ ಕಾಂಕ್ರಿಟೀಕರಣ, ಡಾಮರೀಕರಣ ಕಾಮಗಾರಿ ನಡೆಸಲಾಗಿದೆ. ಇದರಲ್ಲಿ ಹಲವು ಕಾಮಗಾರಿ ಮುಗಿದಿದ್ದು ಕೆಲವು ಪ್ರಗತಿಯಲ್ಲಿದೆ. ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ ಮಾಡಲಾಗಿದೆ.

ಜಿ.ಕೆ.ಗಮೀದ್

ಶಾಲೆ, ಅಂಗನವಾಡಿ,ಆರೋಗ್ಯ ಕೇಂದ್ರಗಳ ಆವರಣ ಗೋಡೆ ನಿರ್ಮಾಣ ಮಾಡಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಯೋಜನೆ ರೂಪಿಸಲಾಗಿದೆ.ವಿವಿಧೆಡೆ ಬೃಹತ್ ಟ್ಯಾಂಕ್‌ಗಳ ನಿರ್ಮಾಣ, ಪೈಪ್ ಲೈನ್ ಕಾಮಗಾರಿ ನಡೆಸಲಾಗಿದೆ‌. ಇದರಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಪ್ರಗತಿಯಲ್ಲಿದೆ. 200ಕ್ಕೂ ಅಧಿಕ ಕುಟುಂಬಗಳಿಗೆ ನೀರಿನ ಟ್ಯಾಂಕ್‌ಗಳನ್ನು ವಿತರಿಸಲಾಗಿದೆ. ಗ್ರಾಮದ ಬಹು ವರ್ಷಗಳ ಬೇಡಿಕೆ 33 ಕೆವಿ ವಿದ್ಯುತ್ ಸಬ್ ಸ್ಟೇಷನ್ ನಿರ್ಮಾಣಕ್ಕೆ ಸ್ಥಳ ಕಾಯ್ದಿರಿಸಲಾಗಿದೆ. ಕಸ ವಿಲೇವಾರಿ ಘಟಕ ಮಂಜೂರಾಗಿದ್ದು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಗ್ರಾಮದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದ್ದು ನಿರಂತರ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಕಸ ಸಾಗಾಟಕ್ಕಾಗಿ

ವಾಹನವನ್ನು ಖರೀದಿಸಿದೆ. ಸಂಜೀವಿನಿ ಸಂಘ ಗಳಿಗೆ ಸಾಲ ಸೌಲಭ್ಯ, ಬೀದಿ ದೀಪ ,ಹೈಮಾಸ್ಟ್ ಸೋಲಾರ್‌ ದೀಪ ಅಳವಡಿಕೆ, ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡಲಾಗಿದೆ. ಬಡ ಕುಟುಂಬಗಳಿಗೆ ಮನೆ ಮಂಜೂರಾತಿ, ವಿಕಲ ಚೇತನರಿಗೆ ವಿವಿಧ ಅಗತ್ಯ ವಸ್ತುಗಳ ಕೊಡುಗೆ ಹೀಗೆ ಗ್ರಾಮದಲ್ಲಿ ಹತ್ತಾರು ಅಭಿವೃದ್ಧಿ ಮತ್ತು ಜನಪರ ಕೆಲಸಗಳನ್ನು ಕೈಗೆತ್ತಿಕೊಂಡಿದೆ.ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲಾಗುತಿದೆ. ಮಾನವ ದಿನಗಳ ಸೃಷ್ಠಿಯಲ್ಲಿ ತಾಲೂಕಿನಲ್ಲಿ ಸಂಪಾಜೆ ಎರಡನೇ ಸ್ಥಾನದಲ್ಲಿದೆ. ಕೋವಿಡ್ ಸಂದರ್ಭದಲ್ಲಿ ಮತ್ತು ಪ್ರಕೃತಿ ವಿಕೋಪ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ನ ಕಾರ್ಯ ನಿರ್ವಹಣೆ ವಿಶೇಷ ಮೆಚ್ಚುಗೆಗೆ ಪಾತ್ರವಾಗಿದೆ. ಗ್ರಾಮ ಪಂಚಾಯತ್‌ನ ಹಲವಾರು ಯೋಜನೆ , ಯೋಚನೆಗಳು ಉತ್ತಮ ಆಡಳಿತಕ್ಕೆ ಹಿಡಿದ

2014ರಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಸ್ವೀಕರಿಸಿದ ಸಂದರ್ಭ

ಕನ್ನಡಿಯಾಗಿದೆ. ಗ್ರಾಮದ ಅಭಿವೃದ್ಧಿಗೆ ಬಂದರು, ಮೀನುಗಾರಿಕೆ‌ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ , ವಿಧಾನ ಪರಿಷತ್‌ನ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಹರೀಶ್‌ ಕುಮಾರ್‌,ಮಂಜುನಾಥ ಭಂಡಾರಿ, ಸಲೀಂ ಅಹಮ್ಮದ್ , ನಝೀರ್ ಅಹಮ್ಮದ್, ಮೋಹನ್ ಕೊಂಡಜ್ಜಿ , ಬಿ.ಎಂ.ಫಾರೂಕ್‌ ಅನುದಾನ ಒದಗಿಸಿ ಗ್ರಾಮದ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಇವರಿಗೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಕೃತಜ್ಞತೆ ಸಲ್ಲಿಸುವುದಾಗಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್ ಹೇಳುತ್ತಾರೆ.


ಪ್ರಮುಖ ವಾಣೀಜ್ಯ ಪಟ್ಟಣ:
ಸುಳ್ಯ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯದಿಂದ 25 ಕಿಮೀ ದೂರದಲ್ಲಿ ಹೆದ್ದಾರಿಗೆ ತಾಗಿಕೊಂಡಿರುವ ಸಂಪಾಜೆಯ ಮುಖ್ಯ ವಾಣೀಜ್ಯ ಪಟ್ಟಣ ಕಲ್ಲುಗುಂಡಿ. ಸಂಪಾಜೆ ಗ್ರಾಮ ಪಂಚಾಯತ್ ಕಚೇರಿ ಒಳಪಟ್ಟ ವಾಣಿಜ್ಯ ಕೇಂದ್ರವಾಗಿದ್ದು ನಿರಂತರ ಜನಸಂಪರ್ಕವನ್ನು ಹೊಂದಿರುವ ಪಟ್ಟಣವಾಗಿ ಬೆಳೆಯುತ್ತಿದೆ. ಸರ್ವಧರ್ಮ ಸಮನ್ವಯತೆಯ ಸಹಬಾಳ್ವೆಯನ್ನು ಇಲ್ಲಿ ಕಾಣಬಹುದಾಗಿದೆ. ಕಲ್ಲುಗುಂಡಿ ಮಹಾವಿಷ್ಣುಮೂರ್ತಿ ದೈವಸ್ಥಾನ , ಜುಮ್ಯಾಮಸೀದಿ , ಸಂತ ಕ್ಷೇವಿಯರ್ ಚರ್ಚೆ ಪ್ರಮುಖ ಆರಾಧನ ಕೇಂದ್ರವಾಗಿದ್ದು, ಹಲವಾರು ದೈವಸ್ಥಾನಗಳು, ಭಜನಾ ಮಂದಿರಗಳು ಗ್ರಾಮಕ್ಕೆ ಶೋಭೆ ತಂದಿವೆ ಸರಕಾರಿ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು , ಸಹಕಾರಿ ಸಂಘಗಳು , ರಾಷ್ಟ್ರೀಕೃತ ಬ್ಯಾಂಕ್‌ಗಳು , ವಾಣಿಜ್ಯ ಕಟ್ಟಡಗಳು , ಆರೋಗ್ಯ ಕೇಂದ್ರಗಳು , ಗ್ರಾಮ ಪಂಚಾಯತ್‌ನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಎಲ್ಲಾ ಸದಸ್ಯರ ಸಹಕಾರ , ಪಂಚಾಯತ್ ಎಲ್ಲಾ ಸದಸ್ಯರು ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ಸಹಕಾರ , ವಿಶೇಷವಾಗಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್‌ ಅವರ ಮೂಲಕ ಹಲವು ಕಾಮಗಾರಿಗಳಿಗೆ ಅನುದಾನ ಒದಗಿಸಿರುವುದು, ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕ್ಕೊಂಗಾಜೆಯವರ ಸಹಕಾರ , ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಉಮ್ಮರ್ ಬೀಜದಕಟ್ಟೆ, ಕಾರ್ಯದರ್ಶಿ ರಹೀಂ ಬೀಜದಕಟ್ಟೆ, ಕೆ.ವಿ.ಜಿ ಆಯುರ್ವೇದ ಕಾಲೇಜು ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ.ಯವರ ಸಹಕಾರ , ಸಂಪಾಜೆ ಗ್ರಾಮದ ಧ.ಗ್ರಾ.ಯೋಜನೆ , ಎಸ್ಎಸ್ಎಫ್ ಹಾಗೂ

ಎಸ್‌‌ಕೆಎಸ್‌ಎಸ್‌ಎಫ್ ತಂಡ ಯಶಸ್ವಿ ಯುವಕ ಮಂಡಲ ಕಲ್ಲುಗುಂಡಿ , ವಿಷ್ಣು ಬಳಗ ಕಡಪಾಲ , ಸ್ತ್ರೀ ಶಕ್ತಿ , ಸಂಜೀವಿನಿ , ಅಂಗನವಾಡಿ ಆಶಾಕಾರ್ಯಕರ್ತೆಯರ ಸಹಕಾರ , ಲಯನ್ಸ್ ಕ್ಲಬ್ , ವರ್ತಕರ ಸಂಘ , ಆರಕ್ಷಕ ಸಿಬ್ಬಂದಿಗಳ ಸಹಕಾರ ಹಾಗೂ ಎಲ್ಲಾ ಗ್ರಾಮಸ್ಥರ ಸಹಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ.ವಿಶೇಷವಾಗಿ ಜಿ.ಪಂ. ಇಂಜಿನಿಯರಿಂಗ್ ಉಪ ವಿಭಾಗದ ಸಹಕಾರ ಹಾಗೂ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ ಎಸ್ . ಮತ್ತು ಸಿಬ್ಬಂದಿ ವರ್ಗ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದ ಸಹಕಾರ ಗ್ರಾಮದ ಅಭಿವೃದ್ಧಿಗೆ ಸದಾ ದೊರಕಿದೆ ಎಂದು ಜಿ.ಕೆ.ಹಮೀದ್ ಹೇಳುತ್ತಾರೆ.

‘ಸಚಿವರು, ವಿಧಾನ ಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಹೀಗೆ ಎಲ್ಲರೂ ಪಕ್ಷ ಭೇದ ಮರೆತು ಕೈ ಜೋಡಿಸಿದ ಕಾರಣ ಗ್ರಾಮದಲ್ಲಿ ಹಲವಾರು ಅಭಿವೃದ್ಧಿ ಕೆಲಸ ನಡೆಸಲು ಸಾಧ್ಯವಾಗಿದೆ ಮತ್ತು ಎರಡನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರದ ಗೌರವ ಬಂದಿದೆ. ಗ್ರಾಮದಲ್ಲಿ ಇನ್ನೂ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆಯುತಿದೆ. ಅದಕ್ಕಾಗಿ ಎಲ್ಲರ ಸಹಕಾರ ಬೇಕಾಗಿದೆ. -ಜಿ.ಕೆ.ಹಮೀದ್ ಗೂನಡ್ಕ , ಅಧ್ಯಕ್ಷರು , ಗ್ರಾ.ಪಂ.ಸಂಪಾಜೆ

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಕೂರ್ಗ್ ಸ್ಪೆಷಲ್ ‘ಹೋಟೆಲ್ ಅರುಣೋದಯ..’ಶುಭಾರಂಭ
next post
ಅ.7ರಂದು ಸಂಪಾಜೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

ಡೆಂಗ್ಯೂ, ಮಲೇರಿಯಾ ಬಗ್ಗೆ ಮುನ್ನೆಚ್ಚರಿಕೆ ಇರಲಿ: ಡಾ. ಕುಮಾರ್

June 6, 2023

ನೈತಿಕ ಪೊಲೀಸ್​ಗಿರಿ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ: ಗೃಹ...

June 6, 2023

ಸಂಪಾಜೆ ಗ್ರಾಮದ ಮೂಲಭೂತ ಅಭಿವೃದ್ಧಿಗಾಗಿ ಹೋರಾಟ: ಸಂಪಾಜೆ ಮೂಲಭೂತ ಸೌಕರ್ಯಗಳ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ
  • ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್ ಆಗಮನ: ಕೇರಳದಲ್ಲಿ 4 ದಿನ ಮಳೆಯ ಮುನ್ಸೂಚನೆ
  • ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ ಸೂಚನೆ: ಆಗಸ್ಟ್‌ನಲ್ಲಿ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಚಾಲನೆ
  • ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ