ಬೆಳ್ಳಾರೆ:ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಾಂಸ್ಕೃತಿಕ ಸಂಘ ಐಕ್ಯೂಏಸಿ ವಿಭಾಗ ಡಾ.ಕೆ.ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇವರುಗಳ ಆಶ್ರಯದಲ್ಲಿ ಖ್ಯಾತ ಸಾಹಿತಿ ಡಾ.ಕೆ.ಶಿವರಾಮ ಕಾರಂತರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಫ್ರೊ.ದಾಮೋದರ ಕಣಜಾಲುರವರು ಶಿವರಾಮ ಕಾರಂತರ ಭಾವಚಿತ್ರಕ್ಕೆ
ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
“ಶಿವರಾಮ ಕಾರಂತರ ಬದುಕೇ ಯುವಜನರಿಗೆ ಸ್ಫೂರ್ತಿ.ಅವರು ನಿಷ್ಠುರವಾದಿ ನಿಲುವಿನ ಮೂಲಕ ಜೀವನ ಸಾಗಿಸಿ ಮಾದರಿಯಾದವರು” ಎಂದರು. ಡಾ.ಶಿವರಾಮ ಕಾರಂತರ ಬದುಕು ಬರಹದ ಕುರಿತು ವಿಶೇಷ ಉಪನ್ಯಾಸ ನೀಡಿದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿಯ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಸುಬ್ರಹ್ಮಣ್ಯ.ಕೆ ರವರು “ವ್ಯಕ್ತಿ ಹೇಗೆ ಬದುಕಬೇಕೆಂಬುದನ್ನು ಸಾಧಿಸಿ ತೋರಿಸಿದವರು ಶಿವರಾಮ ಕಾರಂತರು.ವ್ಯಕ್ತಿ ಹೇಗೆ ಶಕ್ತಿಯಾಗಬಹುದು ಎಂಬುದಕ್ಕೆ ಅವರು ಅತ್ಯುತ್ತಮ ಉದಾಹರಣೆ ಎಂದರು
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು ಸಭಾಧ್ಯಕ್ಷತೆ ವಹಿಸಿದ್ದರು.ಸಾಂಸ್ಕೃತಿಕ ಸಂಘದ ಸಂಚಾಲಕರಾದ ಯತೀಶ್ ಕುಮಾರ್ ಮುಖ್ಯ ಅತಿಥಿಗಳಾಗಿದ್ದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ ಹಾಗೂ ಚಂದ್ರಮತಿ,ಜಿಲ್ಲಾ ಸಾಹಿತ್ಯ ಪರಿಷತ್ತಿನ ಪ್ರತಿನಿಧಿ ರಾಮಚಂದ್ರ ಪಲ್ಲತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಹಿತ್ಯ ಪರಿಷತ್ ಸದಸ್ಯ ಸಂಕೀರ್ಣ ಚೊಕ್ಕಾಡಿ ಕಾರ್ಯಕ್ರಮದಲ್ಲಿ ಹಾಜರಿದ್ದರು. ಶಿವರಾಮ ಕಾರಂತರ ಬದುಕು ಬರಹದ ಕುರಿತು ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ನಿರೀಕ್ಷಾ ಸ್ವಾಗತಿಸಿ,ಮನೀಷಾ ವಂದಿಸಿದರು.ಮಾನಸ ಕಾರ್ಯಕ್ರಮ ನಿರೂಪಿಸಿದರು.












