ಸುಳ್ಯ:ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ಆಯುಧ ಪೂಜೆ ಹಾಗೂ ಶಾರದಾ ಪೂಜಾ ಕಾರ್ಯಕ್ರಮಗಳು ಅ.23ರಂದು ನಡೆಯಿತು. ಸೂರ್ಯಾಲಯದ ಪೂಜೆಯ ಬಳಿಕ ಶಾಲಾ ವಾಹನಗಳು, ಪೀಠೋಪಕರಣಗಳ ತಯಾರಿಕೆಯ ಯಂತ್ರಗಳು, ಕಂಪ್ಯೂಟರ್ ಹಾಗೂ
ಲ್ಯಾಬ್ ಗಳಿಗೆ ಪೂಜೆಯು ಜರಗಿತು. ಡಾ. ಚಂದ್ರಶೇಖರ ದಾಮ್ಲೆ ಪೂಜಾ ಕಾರ್ಯಗಳನ್ನು ನೆರವೇರಿಸಿದರು. ಶಾರದಾ ಪೂಜೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಭಜನೆಗಳನ್ನು ಹಾಡಿ ದೇವರನ್ನು ಸ್ತುತಿಸಿದರು. ಮಂಗಳಾರತಿಯ ಬಳಿಕ ಪ್ರಸಾದ ವಿತರಣೆ ಮಾಡಲಾಯಿತು.ತದನಂತರ ಪೋಷಕರ ಸಭೆಯು ಜರಗಿತು. ಈ ಸಂದರ್ಭದಲ್ಲಿ ಶಾಲಾ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.