ಸುಳ್ಯ: ಮುಂಬರುವ ವಿಧಾನ ಸಭೆ ಚುನಾವಣೆಯ ಸಿದ್ಧತೆಯ ಹಿನ್ನೆಲೆಯಲ್ಲಿ ಅಂತಾರಾಜ್ಯ ಗಡಿಯಲ್ಲಿರುವ ಚೆಕ್ ಪೋಸ್ಟ್ಗಳಿಗೆ ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಿಕ್ರಮ್ ಅಮಟೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿರುವ
ಅಂತಾರಾಜ್ಯ ಗಡಿಯಲ್ಲಿರುವ ಮುರೂರು, ಮಂಡೆಕೋಲು, ಕೊಲ್ಚಾರು, ನಾರ್ಕೋಡು, ಕನ್ಯಾನ ಸಾರಡ್ಕ, ಸಾಲೆತ್ತೂರು,ಆನೇಕಲ್ ಗಳಲ್ಲಿರುವ ಚೆಕ್ ಪೋಸ್ಟ್ ಗಳಿಗೆ ಹಾಗೂ ಕಲ್ಲುಗುಂಡಿ ಅಂತರ ಜಿಲ್ಲಾ ಚೆಕ್ ಪೋಸ್ಟ್ ಗಳಿಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳೊಂದಿಗೆ ಎಸ್ಪಿಯವರು ಭೇಟಿ ನೀಡಿ, ಪರಿಶೀಲಿಸಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಚುನಾವಣೆ ಕರ್ತವ್ಯಗಳ ಬಗ್ಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು.

ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿರುತ್ತಾರೆ. ಚುನಾವಣಾ ಸೂಕ್ಷ್ಮ ಪ್ರದೇಶಗಳಾದ ಗುತ್ತಿಗಾರು ಹಾಗೂ ಜಾಲ್ಸೂರು ಗಳಿಗೆ ಭೇಟಿ ನೀಡಿ ಸಾರ್ವಜನಿಕರ ಸಭೆ ನಡೆಸಿದ್ದಾರೆ.ಸುಳ್ಯ ಹಾಗೂ ವಿಟ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯ ಸೂಕ್ಷ್ಮ ಮತಗಟ್ಟೆ ಗಳಿಗೆ ಭೇಟಿ ನೀಡಿದರು.ಕೇರಳ ರಾಜ್ಯದ ಗಡಿಯಲ್ಲಿರುವ ಆಡೂರ್ ಪೊಲೀಸ್ ಠಾಣೆಯ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಕೇರಳ ರಾಜ್ಯದ ಆಡೂರು ಪೊಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚೆಕ್ ಪೋಸ್ಟ್ ಗಳಲ್ಲಿ ಪರಿಣಾಮ ಕಾರಿಯಾಗಿ ಕರ್ತವ್ಯ ನಿರ್ವಹಿಸುವಲ್ಲಿ ಸಹಕಾರ ನೀಡುವಂತೆ ಚರ್ಚೆ ನಡೆಸಿದ್ದಾರೆ