The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ಶಾಂತಿನಗರ ಕ್ರೀಡಾಂಗಣದ ಕೆಳಭಾಗದಲ್ಲಿ ಹಾಕಿದ ಮಣ್ಣಿನಲ್ಲಿ ಭಾರೀ ಗಾತ್ರದ ಬಿರುಕು: ಸ್ಥಳೀಯರಲ್ಲಿ ಹೆಚ್ಚಿದ ಆತಂಕ- ಇನ್ನೂ ಆರಂಭವಾಗದ ತಡೆಗೋಡೆ ಕಾಮಗಾರಿ

by ದಿ ಸುಳ್ಯ ಮಿರರ್ ಸುದ್ದಿಜಾಲ November 3, 2022
by ದಿ ಸುಳ್ಯ ಮಿರರ್ ಸುದ್ದಿಜಾಲ November 3, 2022
Share this article

ಸುಳ್ಯ: ಸುಳ್ಯ ನಗರ ಸಮೀಪದ ಶಾಂತಿನಗರ ತಾಲೂಕು ಕ್ರೀಡಾಂಗಣದ ಅಭಿವೃದ್ಧಿ ಕಾಮಗಾರಿ ನಡೆಸಿ ಕೆಳ ಭಾಗದಲ್ಲಿ ತುಂಬಿಡಲಾಗಿರುವ ಬೃಹತ್ ಪ್ರಮಾಣದ ಮಣ್ಣಿನಲ್ಲಿ ಈಗ ಭಾರೀ ಗಾತ್ರದ ಬಿರುಕು ಕಾಣಿಸಿಕೊಂಡಿದೆ ಕ್ರೀಡಾಂಗಣ ಕಾಮಗಾರಿ ನಡೆಸಿ ಕೆಳಭಾಗದಲ್ಲಿ ಸುಮಾರು‌ 100 ಅಡಿ ಎತ್ತರಕ್ಕೆ, 100 ಮೀಟರ್ ಅಗಲಕ್ಕೆ ಮಣ್ಣು ತುಂಬಿಡಲಾಗಿದೆ. ಈ ಮಣ್ಣಿನಲ್ಲಿ ಸುಮಾರು 25 ಮೀಟರ್ ಉದ್ದಕ್ಕೆ ಬೃಹತ್ ಗಾತ್ರದ ಬಿರುಕುಗಳು

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಉಂಟಾಗಿದೆ. ಇದು ಕ್ರೀಡಾಂಗಣದ ಕೆಳ ಭಾಗದಲ್ಲಿರುವ ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ. ಕೆಳ ಭಾಗದಲ್ಲಿ ನಿರ್ಮಿಸಲಾಗುವುದು ಎಂದು ಹೇಳಲಾಗಿರುವ ತಡೆಗೊಡೆ ಕಾಮಗಾರಿ ನಡೆಸಲು ಯಾವುದೇ ಕ್ರಮ ಕೈಗೊಂಡಿಲ್ಲ. ಕಳೆದ ಫೆಬ್ರವರಿ ತಿಂಗಳಲ್ಲಿ ಶಾಂತಿನಗರ ಕ್ರೀಡಾಂಗಣದ ಅಭಿವೃದ್ಧಿ ಕಾರ್ಯ ಆರಂಭಿಸಿ ಕ್ರೀಡಾಂಗಣದ ಅಗಲ ಮಾಡಲಾಗಿತ್ತು. ಈ ಮಣ್ಣನ್ನು ಕೆಳ ಭಾಗದಲ್ಲಿ ಭಾರೀ ಎತ್ತರಕ್ಕೆ ತುಂಬಿಡಲಾಗಿತ್ತು. ಇದು ಸ್ಥಳೀಯರ ಆತಂಕಕ್ಕೆ ಮತ್ತು ಭಾರೀ ರಾಜಕೀಯ ವಿವಾದಕ್ಕೆ

ಕಾರಣವಾಗಿತ್ತು. ಮಣ್ಣು ಕುಸಿಯದಂತೆ ಕೆಳಬಾಗದಲ್ಲಿ ತಡೆಗೋಡೆಯನ್ನು ನಿರ್ಮಿಸಬೇಕು ಎಂಬ ಆಗ್ರಹವನ್ನು ಸ್ಥಳೀಯರು ಜನಪ್ರತಿನಿಧಿಗಳ ಮುಂದಿರಿಸಿದ್ದರು. ಸಚಿವ ಅಂಗಾರ ಸೇರಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಸ್ಥಳಕ್ಕೆ ಬಂದು ಪರಶೀಲನೆ ನಡೆಸಿ ತಡೆಗೋಡೆ ನಿರ್ಮಾಣ ಮಾಡುವ ಭರವಸೆ ನೀಡಿದ್ದರು.ಮತ್ತು ಮಳೆಗಾಲದಲ್ಲಿ ಮಣ್ಣು ಕುಸಿಯದಂತೆ ತಾತ್ಕಾಲಿಕವಾಗಿ ಮಣ್ಣಿನ ಮೇಲೆ ಪ್ಲಾಸ್ಟಿಕ್ ಹೊದಿಕೆ ಹಾಸಿ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿತ್ತು. ಇದೀಗ ಪ್ಲಾಸ್ಟಿಕ್ ಟರ್ಪಲ್ ಸಂಪೂರ್ಣ ಹರಿದು ಹೋಗಿದ್ದು ಹಾಕಿದ ಮಣ್ಣಿನಲ್ಲಿ ಭಾರಿ ಗಾತ್ರದ

ಬಿರುಕುಗಳು ಕಾಣಿಸಿ ಕೊಂಡಿದೆ.ಮಳೆಯ ನೀರು ಹರಿದುಬಂದು ಈ ಬಿರುಕಿನ ಮೂಲಕ ಮಣ್ಣಿನೊಳಗೆ ಸೇರುತ್ತಿದೆ. ಇದರಿಂದ ಸ್ಥಳೀಯರಲ್ಲಿ ಮತ್ತೆ ಆತಂಕ ಎದುರಾಗಿದೆ. ಆದಷ್ಟು ಬೇಗ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಸಬೇಕು ಎಂಬ ಅಗ್ರಹ ವ್ಯಕ್ತವಾಗಿದೆ.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ. ಶೇಖರ್ ಇನ್ನಿಲ್ಲ
next post
ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವರಕ್ಷ-ತರಬೇತಿಕಾರ್ಯಕ್ರಮ

You may also like

ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ:...

June 4, 2023

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ: ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ...

June 4, 2023

ಅರೆಭಾಷೆ ರಸಾಯನ: ಐತಾರದ ಪೊಳ್ಮೆ.. ಪೂರಾ ಹೆಳ್ಮಕ್ಕಳಿಗೆ ಕೊಟ್ಟರೆ ಗಳ್ಮಕ್ಕಳಿಗೆ...

June 4, 2023

ಸರಕಾರದ ಗ್ಯಾರಂಟಿ ಯೋಜನೆ: ಯುವ ನಿಧಿ, ಅನ್ನಭಾಗ್ಯ ಯೋಜನೆಗಳ ಮಾರ್ಗಸೂಚಿ...

June 3, 2023

5 ಗ್ಯಾರಂಟಿ ಯೋಜನೆಗಳಂತಹಾ ಜನಪರ ಕಾರ್ಯಕ್ರಮ ನೀಡಲು ಕಾಂಗ್ರೆಸ್‌ನಿಂದ ಮಾತ್ರ...

June 3, 2023

ಬಾಲಸೋರ್ ರೈಲು ಅಪಘಾತ: ಮೃತರ ಸಂಖ್ಯೆ 233 ಕ್ಕೆ, 900...

June 3, 2023

ಒಡಿಶಾ ರೈಲು ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ರೂ.,...

June 2, 2023

ಒಡಿಶಾದ ಬಾಲಸೋರ್​​ನಲ್ಲಿ ರೈಲು ಅಪಘಾತ: 50 ಮಂದಿ ಸಾವು: 300...

June 2, 2023

ರಾಜ್ಯ ಸರಕಾರದ ಐದು ಗ್ಯಾರಂಟಿಗಳ ಅನುಷ್ಠಾನ ಹೇಗೆ.? ಷರತ್ತುಗಳು ಏನು..?...

June 2, 2023

ಐದೂ ಗ್ಯಾರಂಟಿಗಳ ಜಾರಿಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ ಘೋಷಣೆ

June 2, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಸಿಎಸ್​ಕೆ ಸ್ಟಾರ್ ಬ್ಯಾಟರ್ ಋತುರಾಜ್ ಗಾಯಕ್ವಾಡ್​- ಉತ್ಕರ್ಷ ಪವಾರ್ ಮದುವೆ ಸಂಭ್ರಮ
  • ಕೇರಳದ ನರ್ಸ್‌ಗೆ ಒಲಿದ 45 ಕೋಟಿಯ ಅಬುಧಾಬಿ ಬಿಗ್ ಟಿಕೆಟ್ ಲಾಟರಿ ಅದೃಷ್ಟ
  • ಹಿಂದುತ್ವಕ್ಕಾಗಿ, ಸಮಾಜದ ಉಳಿವಿಗಾಗಿ ಯಾವ ತ್ಯಾಗಕ್ಕೂ ಸಿದ್ಧ:ಅರುಣ್ ಕುಮಾರ್ ಪುತ್ತಿಲ: ಲೋಕ‌ ಕಲ್ಯಾಣಾರ್ಥವಾಗಿ ಶ್ರೀ ಸತ್ಯನಾರಾಯಣ ಪೂಜೆ-ಧಾರ್ಮಿಕ ಸಭೆ
  • ಜಾಲ್ಸೂರಿಗೆ ಆಗಮಿಸಿದ ಅರುಣ್ ಕುಮಾರ್ ಪುತ್ತಿಲ: ಅದ್ದೂರಿ ಸ್ವಾಗತ- ವೈಭವದ ಮೆರವಣಿಗೆ
  • ಮಾರ್ನಿಂಗ್ ಕ್ರಿಕೆಟ್‌ ಕ್ಲಬ್ ನೂತನ ಕಚೇರಿ ಉದ್ಘಾಟನೆ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ