ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೆಹರು ಮೆಮೋರಿಯಲ್ ಕಾಲೇಜು ಇದರ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಗಾರವನ್ನು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು
ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಉದ್ಘಾಟಿಸಿ ಶುಭ ಹಾರೈಸಿದರು.ಸಂಪನ್ಮೂಲ ವ್ಯಕ್ತಿಗಳಾದ ಅರೆಭಾಷೆ ಅಕಾಡೆಮಿ ಸದಸ್ಯರಾದ ಚಂದ್ರಶೇಖರ ಪೇರಾಲು ತಾಲೂಕಿನ ಸ್ಥಳನಾಮೆಗಳ ಅಧ್ಯಯನದ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಸ್ವಯಂಸೇವಕ – ಸೇವಕಿಯರು ಯಾವ ರೀತಿಯಲ್ಲಿ ಅಧ್ಯಯನ ಮಾಡಬೇಕು , ಒಂದೊಂದು ಸ್ಥಳಗಳು ಹೇಗೆ ಹುಟ್ಟಿಕೊಳ್ಳಲು ಸಾಧ್ಯವಾಯಿತು. ಈ ಬಗ್ಗೆ ಹೇಗೆ ಅಧ್ಯಯನ ಮಾಡಬೇಕು. ಸ್ಥಳನಾಮೆಯಲ್ಲಿ ಐತಿಹಾಸಿಕವಾಗಿ ಮತ್ತು ಭೌಗೋಳಿಕವಾಗಿ ಹೆಸರು ಹೇಗೆ

ಹೆಸರು ಬಂದಿರುತ್ತದೆ. ಅದನ್ನು ನಾವು ಹೇಗೆ ದಾಖಲೆ ಮಾಡಬೇಕು ಎಂದು ತಿಳಿಸಿಕೊಟ್ಟರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಧಿಕಾರಿ ರತ್ನಾವತಿ. ಡಿ, ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿಗಳಾದ ಚಿತ್ರಲೇಖ ಕೆ. ಎಸ್, ಹರಿಪ್ರಸಾದ್ ಅತ್ಯಾಡಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ

ನಾಯಕರಾದ ಹರ್ಷಿತ್ ಕೆ.ಎಲ್, ಕೌಶಿಕ್ ಕೆ. ಬಿ, ನಾಯಕಿಯರಾದ ಅಕ್ಷತಾ. ಸಿ, ಹವ್ಯಶ್ರೀ ಕೆ.ಎಸ್ ಹಾಗೂ ಸ್ವಯಂಸೇವಕ – ಸೇವಕಿಯರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಘಟಕಾಧಿಕಾರಿಗಳಾದ ಚಿತ್ರಲೇಖ ಕೆ. ಎಸ್ ಸ್ವಾಗತಿಸಿ, ಹರಿಪ್ರಸಾದ್ ಅತ್ಯಾಡಿಯವರು ವಂದಿಸಿದರು. ಎನ್.ಎಸ್.ಎಸ್ ಘಟಕದ ನಾಯಕಿ ಹವ್ಯಶ್ರೀ ಕೆ. ಎಸ್ ಕಾರ್ಯಕ್ರಮ ನಿರೂಪಿಸಿದರು.