The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ
The Sullia Mirror
  • ಮುಖಪುಟ
  • ಗ್ರಾಮೀಣ
  • ನಗರ
  • ತಾಲೂಕು
  • ಜಿಲ್ಲೆ
  • ರಾಜ್ಯ
  • ದೇಶ
  • ವಿದೇಶ
  • ಅಂಕಣ
  • ಸುಳ್ಯ ಮಿರರ್‌ Exclusive
  • ಇತರ
    • ರಾಜಕೀಯ
    • ಕ್ರೀಡೆ
    • ಸಾಂಸ್ಕೃತಿಕ

ವರ್ಣ ರಂಜಿತ ಶೋಭಾಯಾತ್ರೆಯೊಂದಿಗೆ ವೈಭವದ ಸುಳ್ಯ ದಸರಾ ಸಂಪನ್ನ.

by ದಿ ಸುಳ್ಯ ಮಿರರ್ ಸುದ್ದಿಜಾಲ October 11, 2022
by ದಿ ಸುಳ್ಯ ಮಿರರ್ ಸುದ್ದಿಜಾಲ October 11, 2022
Share this article

ಸುಳ್ಯ:ಕತ್ತಲು ಬೆಳಕಿನಾಟದ ವರ್ಣ ವೈಭವ, ಆಕಾಶದಲ್ಲಿ ವರ್ಣ ಚಿತ್ತಾರ ಬಿಡಿಸಿದ ಸಿಡಿ ಮದ್ದು ಪ್ರಯೋಗ, ಜಗಮಗಿಸುವ ವಿದ್ಯುತ್ ದೀಪಗಳ ವರ್ಣಮಯ ಅಲಂಕಾರ, ಜನ‌ಮನ ಗೆದ್ದ ಸ್ತಬ್ಧ ಚಿತ್ರಗಳ ಮೋಹಕ ಭಂಗಿ.. ಅಬ್ಬರಿಸಿದ ಡಿಜೆ ತಾಳಕ್ಕೆ ನೃತ್ಯದ ಸೊಬಗು ನೀಡಿದ ಯುವ ಸಮೂಹ, ಹುಲಿ ವೇಷ, ಪಿಲಿ ಕುಣಿತ.. ಚೆಂಡೆ ವಾದ್ಯ ಮೇಳಗಳು.. ಹೀಗೆ ಸುಳ್ಯ ನಗರದಲ್ಲಿ ವರ್ಣನಾತೀತವಾಗಿ ನಡೆದ ವರ್ಣ ರಂಜಿತ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಶೋಭಾಯಾತ್ರೆಯೊಂದಿಗೆ ಒಂಭತ್ತು ದಿನಗಳ ಕಾಲ ನಡೆದ ವೈಭವದ ಸುಳ್ಯ ದಸರಾ ಸಮಾಪನಗೊಂಡಿತು. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ , ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ , ಸುಳ್ಯ ತಾಲೂಕು ದಸರಾ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ನಡೆದ 51 ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾ ಸರ್ವಾಲಂಕೃತಗೊಂಡ ರಥದಲ್ಲಿ ಸಾಗಿದ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಪಯಸ್ವಿನಿ ನದಿಯಲ್ಲಿ ಜಲಸ್ತಂಭನಗೊಳಿಸುವುದರೊಂದಿಗೆ ಸಂಪನ್ನಗೊಂಡಿತ್ತು . ವಿಶೇಷವಾಗಿ ಅಲಂಕರಿಸಿದ ವಿದ್ಯುತ್ ದೀಪಗಳಿಂದ

ಕಂಗೊಳಿಸಿದ ಮಂಟಪದಲ್ಲಿ ಕುಳ್ಳಿರಿಸಿದ ಶ್ರೀದೇವಿಯ ವಿಗ್ರಹ ಶೋಭಾಯಾತ್ರೆಯ ಮುಂಭಾಗದಲ್ಲಿ ಮತ್ತು ಆಕರ್ಷಕ ಸ್ತಬ್ಧ ಚಿತ್ರಗಳು ಅದರ ಹಿಂದೆ ಸಾಗಿ ಬಂತು. ಶೋಭಾಯಾತ್ರೆಯೂ ಶ್ರೀ ಶಾರದಾಂಬಾ ಕಲಾ ವೇದಿಕೆಯಿಂದ ಹೊರಟು ನಗರದ ಮುಖ್ಯ ರಸ್ತೆಯಲ್ಲಿ ಸಂಚರಿಸಿತು. ಮೈಮನ ರೋಮಾಂಚನಗೊಳಿಸಿದ 15 ಕ್ಕೂ ಹೆಚ್ಚು ಚಲಿಸುವ ಚಿತ್ತಾಕರ್ಷಕ ಸ್ತಬ್ಧ ಚಿತ್ರಗಳು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು. ಕಿವಿಗಪ್ಪಳಿಸಿದ ನಾಸಿಕ್ ಬ್ಯಾಂಡ್‌ನ ಅಬ್ಬರ, ಕೊಂಬು, ಕಹಳೆ, ವಾಲಗ, ವಿಶೇಷ ಸಿಡಿಮದ್ದು ಹೀಗೆ ಸುಳ್ಯ ನಗರದಲ್ಲಿ ಸುಮಾರು 10 ಗಂಟೆಗೂ ಹೆಚ್ಚು ಕಾಲ ನಡೆದ ಶೋಭಾಯಾತ್ರೆ ಅಕ್ಷರಷಃ ನೋಡುಗರ ಕಣ್ಣಿಗೆ ಹಬ್ಬವನ್ನೇ ಸೃಷ್ಠಿಸಿತು. ಚಲಿಸುವ ಹುಲಿ, ಹುಲಿ ವೇಷಗಳು ವಿವಿಧ ಪುರಾಣ ಕಥೆಗಳನ್ನು ಆಧರಿಸಿ ಪ್ರಸ್ತುತ ಪಡಿಸಿದ ಚಲಿಸುವ ಸ್ತಬ್ಧ ಚಿತ್ರಗಳು, ಯಕ್ಷಗಾನ ವೇಷಗಳು ಸೇರಿದಂತೆ ಹತ್ತಾರು

ಸುಳ್ಯ ದಸರಾ- ವೈಭವದ ಶೋಭಾ ಯಾತ್ರೆ

The Sullia Mirror YouTube Channel

Please watch and subscribe

ಆಕರ್ಷಣೆಗಳು ಮನಸೂರೆಗೊಂಡವು. ಸಾವಿರಾರು ಮಂದಿ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಶೋಭಾಯಾತ್ರೆ ವೀಕ್ಷಿಸಿದರು. ಹತ್ತು ಹಲವು ಆಕರ್ಷಣೆಗಳೊಂದಿಗೆ ಸಾಗಿದ ಶ್ರೀದೇವಿಯ ಅದ್ಧೂರಿ ಶೋಭಾಯಾತ್ರೆಯನ್ನು ಭಕ್ತ ಸಮೂಹ ಭಕ್ತಿ ಭಾವದಿಂದ ಕಣ್ತುಂಬಿ ಕೊಂಡರು. ಸಾವಿರಾರು ಮಂದಿ ಶೋಭಾಯಾತ್ರೆಯ ಜೊತೆ ಹೆಜ್ಜೆ ಹಾಕಿದರು. ನೂರಾರು ಯುವಕರು ಡಿಜೆ ತಾಳಕ್ಕೆ ಕುಣಿದು

ಕುಪ್ಪಳಿಸಿದರು.9 ದಿನಗಳ ಕಾಲ ಶಾರದಾಂಬಾ ವೇದಿಕೆಯಲ್ಲಿ ಪೂಜಿಸಲ್ಪಟ್ಟ ಶ್ರೀದೇವಿಗೆ ಪುರೋಹಿತ ನಾಗರಾಜ ಭಟ್ ನೇತೃತ್ವದಲ್ಲಿ ಮಹಾಪೂಜೆ ನಡೆದು ವೈಭವದ ಶೋಭಾಯಾತ್ರೆ ಆರಂಭಗೊಂಡಿತು. ವಿವಿಧ ಸ್ಥಳಗಳಲ್ಲಿ ದೇವಿಗೆ ಸಾರ್ವಜನಿಕರು ಹಣ್ಣು ಕಾಯಿ ಅರ್ಪಿಸಿದರು.

ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವಾಧ್ಯಕ್ಷ ಕೆ.ಗೋಕುಲ್‌ದಾಸ್,ಅಧ್ಯಕ್ಷ ಚಿದಾನಂದ ವಿದ್ಯಾನಗರ, ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಅಧ್ಯಕ್ಷ ನವೀನ್‌ಚಂದ್ರ ಕೆ.ಎಸ್, ಉಪಾಧ್ಯಕ್ಷ ನಾರಾಯಣ ಕೇಕಡ್ಕ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿಯ ಗೌರವ ಸಲಹೆಗಾರರಾದ ಡಾ.ಲೀಲಾಧರ್ ಡಿ.ವಿ, ಪ್ರಧಾನ ಕಾರ್ಯದರ್ಶಿ ರವಿಚಂದ್ರ ಕೊಡಿಯಾಲಬೈಲು, ಕೋಶಾಧಿಕಾರಿ ಪ್ರದೀಪ್ ಕೆ.ಎನ್. ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಹಾಗು ಮೂರು ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದಿ ಸುಳ್ಯ ಮಿರರ್ ಸುದ್ದಿಜಾಲ

ದಿ ಸುಳ್ಯ ಮಿರರ್‌ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್‌ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್‌ ಮಾಡಿರಿ.

previous post
ಏಳು ದಶಕದ ವಿಸ್ಮಯದ ಬದುಕಿಗೆ ತೆರೆ; ಅನಂತಪುರಕ್ಷೇತ್ರದಲ್ಲಿ ಪುನರವತರಿಸುವುದೇ ಮತ್ತೊಂದು ಮೊಸಳೆ..??
next post
ಸುಳ್ಯ ನ.ಪಂ. ಸಾಮಾನ್ಯ ಸಭೆ:ಆಡಳಿತ ವ್ಯವಸ್ಥೆ ಕುಸಿದಿದೆ- ಅಭಿವೃದ್ದಿ ಕುಂಠಿತವಾಗಿದೆ: ವಿಪಕ್ಷ ಆರೋಪ

You may also like

ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ

June 8, 2023

ಕೇರಳಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಎಂಟು ದಿನ ತಡವಾಗಿ ಮಾನ್ಸೂನ್...

June 8, 2023

ಗ್ಯಾರಂಟಿ ಯೋಜನೆಗಳಅರ್ಜಿ ಸಲ್ಲಿಕೆ, ಅನುಮೋದನೆ ಪ್ರಕ್ರಿಯೆ ಸರಳವಾಗಿರಲಿ; ಅಧಿಕಾರಿಗಳಿಗೆ ಸಿಎಂ...

June 8, 2023

ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

June 8, 2023

ಎಸ್ಎಸ್ಎಫ್ ಇಲ್ಲುಮಿನೇಟ್ ಕ್ಯಾಂಪ್

June 7, 2023

ಎಸ್‌ಬಿಎಸ್ ಏಣಾವರ: ನೂತನ ಪದಾಧಿಕಾರಿಗಳು

June 7, 2023

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಸರಕಾರ

June 7, 2023

ಅರಬ್ಬಿ ಸಮುದ್ರದಲ್ಲಿ ‘ಬಿಪರ್ಜೋಯ್’ ಚಂಡಮಾರುತ ಸೃಷ್ಟಿ: ತೀವ್ರ ಸ್ವರೂಪ ಪಡೆಯುತ್ತಿರುವ...

June 7, 2023

ಸಂಪಾಜೆಯ ನದಿಗಳಲ್ಲಿ ತುಂಬಿದ ಹೂಳು ತೆಗೆಯುವ ಕಾರ್ಯಾಚರಣೆಗೆ ಚಾಲನೆ

June 7, 2023

ಸುಳ್ಯ ನಗರ ಪಂಚಾಯತ್ ಪರಿಸರ ಈಗ ತ್ಯಾಜ್ಯ ಮುಕ್ತ..! ನ.ಪಂ.ಸುತ್ತಲೂ...

June 6, 2023

Leave a Comment Cancel Reply

ಇತ್ತೀಚಿನ ಸುದ್ದಿಗಳು

  • ಮಂಗಳೂರಿನಲ್ಲಿ ಮಳೆ
  • ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ‘ನಮ್ಮ ನಡಿಗೆ ಸ್ವಚ್ಛತೆಯೆಡೆಗೆ’ ಜಾಗೃತಿ ಆಂದೋಲನ
  • ಎನ್.ಎಸ್.ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸವಾದ್ ಸುಳ್ಯ ನೇಮಕ
  • ಸ್ಪೀಕರ್ ಯು.ಟಿ.ಖಾದರ್ ಅವರಿಂದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ
  • 11ರಿಂದ ಜಿಲ್ಲೆಯಾದ್ಯಂತ ಜಾನುವಾರುಗಳ ಚರ್ಮ ಗಂಟು ರೋಗದ ವಿರುಧ್ಧ ಉಚಿತ ಲಸಿಕಾ ಅಭಿಯಾನ

ನಮ್ಮ ಬಗ್ಗೆ

ದಿ ಸುಳ್ಯ ಮಿರರ್ ಮಾಧ್ಯಮವು ಆಧುನಿಕ ಜಗತ್ತಿನ ವೇಗಕ್ಕೆ ಅನುಗುಣವಾಗಿ ಸುದ್ದಿಗಳನ್ನು ಅತ್ಯಂತ ವೇಗವಾಗಿ ಜನರಿಗೆ ತಲುಪಿಸುವ ಡಿಜಿಟಲ್ ಮಾಧ್ಯಮವಾಗಿದೆ. ಪತ್ರಕರ್ತ ಗಂಗಾಧರ ಕಲ್ಲಪಳ್ಳಿ ನೇತೃತ್ವದಲ್ಲಿ ಕ್ರಿಯಾಶೀಲ ಮತ್ತು ವೃತ್ತಿಪರ ಪತ್ರಕರ್ತರ ತಂಡ ಸುದ್ದಿಗಳನ್ನು ಅತ್ಯಂತ ಸರಳವಾಗಿ ಮತ್ತು ವೇಗವಾಗಿ ಮನ ಮುಟ್ಟುವಂತೆ ಧನಾತ್ಮಕ ದೃಷ್ಠಿಕೋನದಲ್ಲಿ ಜನರಿಗೆ ಮುಟ್ಟಿಸುವ ಕಾರ್ಯ ಮಾಡುತ್ತಿದೆ. ಜನಪರ, ಅಭಿವೃದ್ಧಿ ಪರ, ಪಾರದರ್ಶಕ ಮತ್ತು ಧನಾತ್ಮಕ ಪತ್ರಿಕೋದ್ಯಮ ನಮ್ಮ ಗುರಿ. ಜನರ ಆಶೋತ್ತರಗಳಿಗೆ ಧ್ವನಿಯಾಗುವ, ಸಮಸ್ಯೆಗಳಿಗೆ ಕನ್ನಡಿಯಾಗುವ ಆಶಯ ನಮ್ಮದು.ಗ್ರಾಮೀಣ ಭಾಗದಿಂದ ಆರಂಭಗೊಂಡು ಅಂತಾರಾಷ್ಟ್ರೀಯ ಮಟ್ಟದವರೆಗಿನ ಸುದ್ದಿಗಳ ಸಮೃದ್ಧಿಯ ಜೊತೆಗೆ, ವಿಶೇಷ ಲೇಖನಗಳು,ಮಾನವಸಾಕ್ತ ವರದಿಗಳು, ಹಿರಿಯ ಪತ್ರಕರ್ತರ, ಬರಹಗಾರರ ಅಂಕಣಗಳು ನಮ್ಮ ಮೀಡಿಯಾದಲ್ಲಿ ಓದುಗರನ್ನು ಮುಟ್ಟಲಿದೆ.

ಸಂಪರ್ಕಿಸಿ

ನಮ್ಮನ್ನು ಹೀಗೆ ಸಂಪರ್ಕಿಸಿ:

ಇ-ಮೇಲ್ ಐಡಿ: thesulliamirror@gmail.com
ದೂರವಾಣಿ ಸಂಖ್ಯೆ: 9008417480

ನಮ್ಮೊಂದಿಗೆ ಸಂಪರ್ಕದಲ್ಲಿರಿ

Facebook Twitter Whatsapp

2023 - Sullia Mirror. Website made with 🧡 by The Web People.

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ

NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ