ನವದೆಹಲಿ: ಗಾಂಧಿ ಜಯಂತಿಯ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಕರೆಕೊಟ್ಟಿರುವ ಸ್ವಚ್ಛತಾ ಅಭಿಯಾನ ದೇಶದಾದ್ಯಂತ ನಡೆಯಿತು. ಇಂದು ಬೆಳಿಗ್ಗೆ 10 ಗಂಟೆಯಿಂದ ಒಂದು ಗಂಟೆ ಸ್ವಚ್ಛತಾ ಅಭಿಯಾನ ನಡೆಯಿತು. ಅಕ್ಟೋಬರ್ 1ರಂದು ಬೆಳಿಗ್ಗೆ 10 ಗಂಟೆಗೆ, ನಾವು ಒಂದು ಪ್ರಮುಖ ಸ್ವಚ್ಛತೆಯ ಅಭಿಯಾನಕ್ಕಾಗಿ ಒಗ್ಗೂಡುತ್ತೇವೆ. ಸ್ವಚ್ಛ ಭಾರತ್
ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸ್ವಚ್ಛ ಭವಿಷ್ಯವನ್ನು ರೂಪಿಸಲು ಈ ಪ್ರಯತ್ನಕ್ಕೆ ಕೈಜೋಡಿಸಿ’ ಎಂದು ಪ್ರಧಾನಿ ಮೋದಿ ಹೇಳಿದ್ದರು.
ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದ ಭಾಗವಾಗಿ ‘ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್’ ಎಂಬ ಅಭಿಯಾನ ಇಂದು ನಡೆಯುತಿದೆ.
‘ಸ್ವಚ್ಛತೆಗಾಗಿ ದೊಡ್ಡ ಕಾರ್ಯಕ್ರಮವೊಂದು ಅ.1ರಂದು ನಡೆಯಲಿದೆ. ಎಲ್ಲರೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು.
ಒಂಬತ್ತು ವರ್ಷಗಳ ಹಿಂದೆ, 2014 ರಲ್ಲಿ ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಸ್ವಚ್ಛತಾ ಅಭಿಯಾನವನ್ನು ಆಚರಿಸಲು ಕರೆಕೊಟ್ಟಿದ್ದರು.